ರಾಷ್ಟ್ರೀಯ

ಹಿಂದೂಗಳು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಲಿ: ಸಾಧ್ವಿ ಪ್ರಜ್ಞಾ ಸಿಂಗ್‌

Pinterest LinkedIn Tumblr


ಔರಂಗಾಬಾದ್‌: ದೇಶದ ಒಳಿತಿಗಾಗಿ ಹಿಂದೂಗಳು ಹೆಚ್ಚು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಸಾಧ್ವಿ ಪ್ರಜ್ಞಾ ಸಿಂಗ್ ಕರೆ ನೀಡಿದ್ದಾರೆ.

ಮಾಲೇಗಾಂವ್‌ ಬಾಂಬ್‌ ಸ್ಫೋಟದ ಆರೋಪಿಯಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್‌ ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಔರಂಗಾಬಾದ್‌ನಲ್ಲಿ ಮಾತನಾಡಿದ ಸಾಧ್ವಿ ಪ್ರಜ್ಞಾ ಸಿಂಗ್‌, ಹಿಂದೂಗಳು ಹೆಚ್ಚು ಹೆಚ್ಚು ಮಕ್ಕಳು ಮಾಡಿಕೊಳ್ಳಬೇಕು ಎಂದು ಕೇಸರಿ ಪಕ್ಷ ಕರೆ ನೀಡುತ್ತದೆ. ಇದನ್ನು ನಾನು ಹೇಳಬೇಕಾದ ಅಗತ್ಯವಿಲ್ಲ. ಆದರೆ ನೀವೆಲ್ಲರೂ ಇದರ ಬಗ್ಗೆ ಯೋಚನೆ ಮಾಡಬೇಕು ಎಂದರು.

ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲವೂ ಆಧಾರರಹಿತವಾದುದು. ನನ್ನನ್ನು ಸಿಲುಕಿಸಲು ಈ ರೀತಿಯ ಯೋಜನೆ ಮಾಡಿಕೊಳ್ಳಲಾಗಿದೆ. ಕೇಸರಿ ಭಯೋತ್ಪಾದನೆ ಎಂದು ಹೇಳುವ ಮೂಲಕ ಸಂಚು ರೂಪಿಸಲಾಗಿದೆ ಎಂದರು.

ದೇಶದ ಇಮೇಜನ್ನು ಜಾಗತಿಕ ಮಟ್ಟದಲ್ಲಿ ಕೆಡಿಸಲು ಈ ರೀತಿಯ ಸಂಚು ಮಾಡಲಾಗುತ್ತಿದೆ ಎಂದು ಸಾಧ್ವಿ ತಿಳಿಸಿದ್ದಾರೆ.

ಇಂಥ ಸಂಚುಗಳನ್ನು ತಡೆಯಲು ರಾಜಕೀಯಕ್ಕೆ ಧುಮುಕಲು ಸಜ್ಜಾಗಿದ್ದೇನೆ. ದೇಶ ಸೇವೆ ಮಾಡಲು ನಾನು ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿದ್ದಾರೆ.

Comments are closed.