ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲಗಾಂವ್ ಜಿಲ್ಲೆಯಲ್ಲಿ ತನ್ನ ಸರ್ವಿಸ್ ರಿವಾಲ್ವರ್ನಿಂದ ಗುಂಡೆಸೆದುಕೊಂಡು ಸೇನಾ ಜವಾನನೋರ್ವ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕುಲಗಾಂವ್ ಜಿಲ್ಲೆಯ ಕಾಜಿಗುಂದ್ಪ್ರದೇಶದಲ್ಲಿನ ಮುಘಲ್ ಗುಂದ್ನಲ್ಲಿರುವ ಸೇನಾ ಶಿಬಿರದಲ್ಲಿ 10ನೇ ಸಿಕ್ಖ್ ರೆಜಿಮೆಂಟ್ಗೆ ಸೇರಿದ ಸಿಪಾಯ್ ಕುಲವೀಂದರ್ ಸಿಂಗ್ ತನ್ನ ಸೇವಾ ರಿವಾಲ್ವರ್ನಿಂದ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದ ಕುಲವೀಂದರ್ ಅವರನ್ನು ಒಡನೆಯೇ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅಲ್ಲಿ ಅವರು ಕೊನೆಯುಸಿರೆಳೆದರು ಎಂದು ಅಧಿಕಾರಿ ಹೇಳಿದರು.
-ಉದಯವಾಣಿ
Comments are closed.