ಚೆನ್ನೈ: ತಮಿಳುನಾಡಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರ್ನಾಟಕ ಮೂಲದ 7 ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿಗೆ.
ತಮಿಳುನಾಡಿನ ವಿರುದ್ಧ ನಗರ ಜಿಲ್ಲೆಯ ರಾಜಂಪಾಳ್ಯ ಬಳಿ ಈ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಇನ್ನೋವಾ ಕಾರು ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತುಪಟ್ಟ ಏಳೂ ಮಂದಿ ಕರ್ನಾಟಕದ ಮೂಲದವರಾಗಿದ್ದು, ಮೃತರನ್ನು ಲಕ್ಷ್ಮಿ ನಾರಾಯಣ, ರತ್ನ, ಕಲಾವತಿ, ಶಂಕರೇಗೌಡ, ಶ್ರೀಧರ, ಕೀರ್ತಿಕಾ, ಮಗು ಪ್ರವೀಣ್ ಎಂದು ಗುರುತಿಸಲಾಗಿದೆ.
ಪೊಲೀಸರು ತಿಳಿಸಿರುವಂತೆ ಕೇರಳಕ್ಕೆ ಪ್ರವಾಸ ಹೋಗಿದ್ದ ಕರ್ನಾಟಕ ಮೂಲದ ಕುಟುಂಬ ಕೇರಳದಿಂದ ವಾಪಸ್ ಬರುವಾಗ ತಮಿಳುನಾಡು ಸಮೀಪ ಈ ಅಪಘಾತ ಸಂಭವಿಸಿದೆ. ಚಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಪಟ್ಟಿದ್ದು, ಮೃತದೇಹಗಳು ಮಧುರೈ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
Comments are closed.