ರಾಷ್ಟ್ರೀಯ

ಬಿಜೆಪಿಗೆ ಗುಡ್ ಬೈ ಹೇಳಿದ ಯಶವಂತ್ ಸಿನ್ಹಾ! ಮುಂದಿನ ನಡೆ ಏನು ಗೊತ್ತೇ…?

Pinterest LinkedIn Tumblr

ನವದೆಹಲಿ: ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಬಿಜೆಪಿ ತೊರೆದಿದ್ದು, ದೇಶಾದ್ಯಂತ ಪ್ರಜಾಪ್ರಭುತ್ವ ಉಳಿಸಿ ಅಭಿಯಾನ ಕೈಗೊಳ್ಳಲಿದ್ದಾರೆ.

ಕೆಲವೇ ತಿಂಗಳ ಹಿಂದೆ ಸ್ಥಾಪನೆಯಾಗಿರುವ ರಾಷ್ಟ್ರ ಮಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಯಶ್ವಂತ್ ಸಿನ್ಹಾ, ಬಿಜೆಪಿಯೊಂದಿಗಿನ ದೀರ್ಘಕಾಲದ ಪಯಣವನ್ನು ಮುಕ್ತಾಯಗೊಳಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆಯೂ ಮಾಹಿತಿ ನೀಡಿರುವ ಯಶ್ವಂತ್ ಸಿನ್ಹಾ, ಇನ್ನು ಮುಂದಿನ ದಿನಗಳಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ ಎಂದೂ ಸ್ಪಷ್ಟಪಡಿಸಿರುವ ಯಶ್ವಂತ್ ಸಿನ್ಹಾ, ಪಕ್ಷಾಧಾರಿತ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಯಾವುದೇ ಉನ್ನತ ಹುದ್ದೆಗೆ ನಾನು ಆಕಾಂಕ್ಷಿಯಲ್ಲ ಎಂದಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಟಿಕಾಪ್ರಹಾರ ನಡೆಸಿದ್ದ ಯಶ್ವಂತ್ ಸಿನ್ಹಾ ಪಕ್ಷದ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಅವರಿಗೆ ಮೌನ ಮುರಿಯುವಂತೆ ಆಗ್ರಹಿಸಿದ್ದರು.

Comments are closed.