ರಾಷ್ಟ್ರೀಯ

ಪರಾರಿಯಾಗುವ ವಂಚಕರ ಆಸ್ತಿ ಮುಟ್ಟುಗೋಲು: ಸುಗ್ರೀವಾಜ್ಞೆಗೆ ಕೇಂದ್ರ ಸಂಪುಟ ನಿರ್ಧಾರ

Pinterest LinkedIn Tumblr


ಹೊಸದಿಲ್ಲಿ: ಆರ್ಥಿಕ ಅಪರಾಧ ಎಸಗಿ ಸುಸ್ತಿದಾರರಾಗಿ ವಿದೇಶಕ್ಕೆ ಪರಾರಿಯಾಗುವ ಘೋಷಿತ ಅಪರಾಧಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಕಲ್ಪಿಸುವ ಸುಗ್ರೀವಾಜ್ಞೆ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ವಿದೇಶದಿಂದ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

ಪರಾರಿಯಾದ ಆರ್ಥಿಕ ಅಪರಾಧಿಗಳ ವಿರುದ್ಧ ಕ್ರಮಕ್ಕಾಗಿ, ಸುಗ್ರೀವಾಜ್ಞೆ ಜಾರಿಗೆ ತರುವ ಮೂಲಕ ವಂಚಕರ ವಿರುದ್ಧ ಕಾನೂನು ಕ್ರಮ ತರಲು ಕೇಂದ್ರ ಸರಕಾರ ಅವಕಾಶ ಕಲ್ಪಿಸಿದೆ.

ವಿಜಯ್‌ ಮಲ್ಯ, ನೀರವ್‌ ಮೋದಿ, ಲಲಿತ್‌ ಮೋದಿ, ಮೆಹುಲ್‌ ಚೋಕ್ಸಿ ಸೇರಿದಂತೆ ಹಲವಾರು ಆರ್ಥಿಕ ಅಪರಾಧಿಗಳ ಪಾಲಿಗೆ ಇದು ಕಬ್ಬಿಣದ ಕಡಲೆಯಾಗಿ ಪರಿಣಮಿಸಲಿದೆ.

ವಂಚಕರಿಗೆ ಸೇರಿದ ಎಲ್ಲ ಆಸ್ತಿಯನ್ನು ಯಾವುದೇ ತೊಡಕು ಇಲ್ಲದೇ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.

100 ಕೋಟಿ ರೂಪಾಯಿಗಿಂತ ಹೆಚ್ಚು ಮೊತ್ತದ ವಂಚನೆ ನಡೆಸಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ವಿದೇಶಕ್ಕೆ ಪರಾರಿಯಾದ ಅಪರಾಧಿಗಳು ವಿಚಾರಣೆಗೆ ಕರೆತರಲು ಹಸ್ತಾಂತರ ಪ್ರಕ್ರಿಯೆಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

ಆರ್ಥಿಕ ವಂಚಕರನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ವಿದೇಶಗಳ ಜತೆ ಒಪ್ಪಂದ ಮಾಡಿಕೊಳ್ಳುವ ಕುರಿತೂ ಸುಗ್ರೀವಾಜ್ಞೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

Comments are closed.