ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಇ ಮೊಹಮ್ಮದ್(ಜೆಇಎಂ) ಸ್ವಯಂ ಘೋಷಿತ ಕಾರ್ಯಾಚರಣೆ ಕಮಾಂಡರ್ ಸೇರಿದಂತೆ ನಾಲ್ವರು ಉಗ್ರರನ್ನು ಭಾರತೀಯ ಸೇನೆಯ ಯೋಧರ ಹೊಡೆದುರುಳಿಸಿದ್ದಾರೆ.
ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರು ಭಾರತೀಯ ಯೋಧರ ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಡಿಜಿಪಿ ಡಾ.ಎಸ್ ಪಿ ವೈದ್ ಸ್ಪಷ್ಟಪಡಿಸಿದ್ದಾರೆ.
ಜೆಇಎಂ ಉಗ್ರ ಸಂಘಟನೆಯ ಕಮಾಂಡರ್ ಮುಫ್ತಿ ಯಾಸೀರ್ ಎನ್ ಕೌಂಟರ್ ನಲ್ಲಿ ಬಲಯಾಗಿರುವುದಾಗಿ ವೈದ್ ಅವರು ಟ್ವೀಟರ್ ಮೂಲಕ ತಿಳಿಸಿದ್ದಾರೆ.
ರಾಷ್ಟ್ರೀಯ ರೈಫಲ್(ಆರ್ ಆರ್) ವಿಶೇಷ ಕಾರ್ಯಾಚರಣೆ ಪಡೆ(ಎಸ್ಒಜಿ), ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡಿದ್ದರು.
ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮತ್ತು ವಿಶೇಷ ಪೊಲೀಸ್ ಪಡೆಯ ಯೋಧರಿಬ್ಬರು ಹುತಾತ್ಮರಾಗಿದ್ದಾರೆ.
Comments are closed.