ರಾಷ್ಟ್ರೀಯ

ಸೋನಿಯಾ ಗಾಂಧಿಯಿಂದ ಅಪರೇಷನ್​ ಹಸ್ತಕ್ಕೆ ಸೂಚನೆ?

Pinterest LinkedIn Tumblr

7
ಬೆಂಗಳೂರು: ಅಧಿಕಾರ ಹಿಡಿಯಲು ಬಿಜೆಪಿ ಆಪರೇಷನ್​ ಕಮಲಕ್ಕೆ ಕೈಹಾಕಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಕೂಡ ಆಪರೇಷನ್​ ಮಾಡಲು ಮುಂದಾಗಿದೆ. ಖುದ್ದು ಸೋನಿಯಾ ಗಾಂಧಿ ಅವರಿಂದಲೇ ರಾಜ್ಯ ಕಾಂಗ್ರೆಸ್​ ನಾಯಕರಿಗೆ ಆದೇಶ ಬಂದಿದೆ ಎಂದು ಹೇಳಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್​, ಡಿ.ಕೆ ಶಿವಕುಮಾರ್​ ಅವರಿಗೆ ಸೋನಿಯಾ ಗಾಂಧಿ ಅವರು ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗಿದ್ದು, ಬಿಜೆಪಿ ವಿರುದ್ಧ ಆಪರೇಷನ್​ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರದಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ನೀವೂ ಕೂಡ ಆಪರೇಷನ್​ ನಡೆಸಬೇಕು. ಕಾಂಗ್ರೆಸ್​ಗೆ ಬಂದರೆ ಸಚಿವ ಸ್ಥಾನ ನೀಡಲಾಗುವುದು ಎಂದು ಮನವೊಲಿಸಬೇಕು ಎಂದು ಆದೇಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

Comments are closed.