ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಶ್ವಾಸ ಮತ ಯಾಚನೆ ಸಂಬಂಧ, ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಸುಪ್ರೀಂ ಕೋರ್ಟ್ ಮುಂದುವರೆಸಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಕೆ.ಜಿ ಬೋಪಯ್ಯ ಅವರು ಹಂಗಾಮಿ ಸ್ಪೀಕರ್ ಆಗಿ ಮುಂದುವರೆಯಲಿದ್ದಾರೆ. ಹೀಗಾಗಿ ಇಂದಿನ ಬಹುಮತ ಸಾಬೀತು ಪ್ರಕ್ರಿಯೆ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ.
ಅಂತೆಯೇ ಇಂದಿನ ಬಹುಮತ ಸಾಬೀತು ಪ್ರಕ್ರಿಯೆಯನ್ನು ಎಲ್ಲ ಚಾನೆಲ್ಗಳಲ್ಲಿ ನೇರಪ್ರಸಾರ ಮಾಡಲು ಸೂಚಿಸಿದ್ದು, ಪಾರದರ್ಶಕತೆ ಕಾಯ್ದುಕೊಳ್ಳಲು ನೇರ ಪ್ರಸಾರವೊಂದೇ ಪರಿಹಾರ ಎಂದೂ ಹೇಳಿದೆ.
Comments are closed.