ರಾಷ್ಟ್ರೀಯ

ತಾಯಿಯ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮಗ ಸಾವು!

Pinterest LinkedIn Tumblr

ಹೈದರಾಬಾದ್: ತಾಯಿಯ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವ ಸಲುವಾಗಿ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮಗ ದಾರುಣ ಸಾವನ್ನಪ್ಪಿರುವ ದಾರುಣ ಘಟನೆ ಹೈದರಾಬಾದ್ ನಲ್ಲಿ ಸಂಭವಿಸಿದೆ.

ಇನ್ಫೋಸಿಸ್ ನಲ್ಲಿ ಉದ್ಯೋಗಿ 32 ವರ್ಷದ ಅರುಮಿಲ್ಲಿ ವೀರಾ ವೆಂಕಟ ಸತ್ಯನಾರಾಯಣ ಮೃತ ದುರ್ದೈವಿ. ಸತ್ಯನಾರಾಯಣ ಅವರು ನಾದಿನಿ ಜೊತೆ ಕ್ಯಾಬ್ ನಲ್ಲಿ ಕೊಡದ್ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಬರುತ್ತಿದ್ದಾಗ ಕಾರಿಗೆ ಟ್ರಕ್ ಡಿಕ್ಕಿ ಹೊಡಿದಿದ್ದು ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಕ್ಯಾಬ್ ಚಾಲಕ ಕೆ ರಾಜೇಶ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.

ಮೃತ ಸತ್ಯನಾರಾಯಣ ಪತ್ನಿ ವೆಂಕಟ ಸೌಜನ್ಯ ಅವರು ಗರ್ಭಿಣಿಯಾಗಿದ್ದು ಪತಿ ಹಾಗೂ ತಂಗಿಯ ಸಾವಿನ ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Comments are closed.