ನವದೆಹಲಿ: ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹತ್ತು ದಿನದೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭರವಸೆ ನೀಡಿದರು.
ಬುಧವಾರ ಮಧ್ಯಪ್ರದೇಶದ ಮಂದಸೂರಿನ ಪಿಪ್ಲಿಯಲ್ಲಿ ಗೋಲಿಬಾರ್ನಲ್ಲಿ ಮೃತಪಟ್ಟ ರೈತರ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಿಜವೇನೆಂದರೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ರೈತರ ಬಗ್ಗೆ ಕಾಳಜಿಯನ್ನು ಹೊಂದಿಲ್ಲ. ಸಿಎಂ ಶಿವರಾಜ್ಸಿಂಗ್ ಚೌಹಾನ್ ನೇತೃತ್ವದ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕಳೆದ ವರ್ಷ ರೈತರು ನಡೆಸಿದ್ದ ಪ್ರತಿಭಟನೆ ವೇಳೆ ಪೊಲೀಸರ ಗೋಲಿಬಾರ್ನಲ್ಲಿ 6 ಮಂದಿ ಮೃತಪಟ್ಟಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ವಿರುದ್ಧ ಕ್ರಮ ಕೈಗೊಂಡವರಿಗೆ ತಕ್ಕ ಶಿಕ್ಷೆ ಆಗುತ್ತದೆ ಎಂದು ಹೇಳಿದರು. ರೈತರ ಸ್ಮರಣಾರ್ಥದ ಜಾಥಾವನ್ನ ಕಾಂಗ್ರೆಸ್ ಕಿಸಾನ್ ಸಮೃದ್ಧಿ ಸಂಕಲ್ಪ ಜಾಥಾ ಅಂತಾ ಕರೆದಿದೆ.
Comments are closed.