ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇದೇ ಜೂನ್ 13ರಂದು ಇಫ್ತಾರ್ ಕೂಟವನ್ನು ಏರ್ಪಡಿಸುತ್ತಿದ್ದಾರೆ. ಈ ಕೂಟಕ್ಕೆ ಹಲವಾರು ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ. ಆದರೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಆಹ್ವಾನ ನೀಡಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರ ರಾಜಧಾನಿಯಲ್ಲಿ ತಾಜ್ ಪ್ಯಾಲೇಸ್ ಹೊಟೇಲ್ನಲ್ಲಿ ಏರ್ಪಡಿಸಲಾಗಿರುವ ಈ ಇಫ್ತಾರ್ ಕೂಟಕ್ಕೆ ಆಮಂತ್ರಣ ದೊರಕದವರ ಪಟ್ಟಿಯಲ್ಲಿ ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಕೂಡ ಸೇರಿದ್ದಾರೆ.
ಸರಿಸುಮಾರು ಎರಡು ವರ್ಷಗಳ ಅಂತರದ ಬಳಿಕ ಕಾಂಗ್ರೆಸ್ ಪಕ್ಷ ಇಫ್ತಾರ್ ಕೂಟವನ್ನು ಏರ್ಪಡಿಸುತ್ತಿದೆ
Comments are closed.