ರಾಷ್ಟ್ರೀಯ

ಸರ್ಕಾರಿ ಬಸ್ಸೊಂದಕ್ಕೆ ಆಟೋ ರಿಕ್ಷಾ ಡಿಕ್ಕಿ: 9 ಮಂದಿ ದಾರುಣ ಸಾವು

Pinterest LinkedIn Tumblr

ವಿಜಯವಾಡ: ಸರ್ಕಾರಿ ಬಸ್ಸೊಂದಕ್ಕೆ ಆಟೋ ರಿಕ್ಷಾ ಢಿಕ್ಕಿಯಾಗಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ 7 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ರಿಕ್ಷಾದಲ್ಲಿ ಮಹಿಳೆಯರು ಮತ್ತು ಅನಾರೋಗ್ಯಕ್ಕೀಡಾದವರು ನಾಟಿ ಔಷಧಿ ತರಲೆಂದು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಕರ್ನೂಲು -ನಂದ್ಯಾಲ್ ಹೆದ್ದಾರಿಯ ಸೋಮಯಾಜುಪಲ್ಲೆ ಬಳಿ ಅಪಘಾತ ಸಂಭವಿಸಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಟೋದಲ್ಲಿ 13 ಮಂದಿ ಪ್ರಯಾಣಿಸುತ್ತಿದ್ದರು, ಆಟೋ ಚಾಲಕ ತಪ್ಪು ದಾರಿಯಲ್ಲಿ ಬರುತ್ತಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

Comments are closed.