
ಬಸ್ತಿ: ಕುವಾನ್ ನದಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ವಿಸರ್ಜನೆ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಜಿಲ್ಲೆಯ ಅಧಿಕಾರಿಗಳು ನದಿಗೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಜಪೇಯಿ ಅವರ ಅಸ್ಥಿ ವಿಸರ್ಜನೆ ಸಮಾರಂಭದಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು ಸೇರಿದಂತೆ ಸಂಸದರು ಹಾಗೂ ಶಾಸಕರು ಭಾಗವಹಿಸಿದ್ದರು.
ವಾಜಪೇಯಿ ಅವರ ಚಿತಾಭಸ್ಮ ವಿಸರ್ಜಿಸಲು ತೆರಳುತ್ತಿದ್ದ ಬೋಟ್ ಓವರ್ ಲೋಡ್ ಆದ ಪರಿಣಾಮ ಅದರಲ್ಲಿದ್ದ ರಾಜ್ಯ ಬಿಜೆಪಿ ಘಟಕದ ಮಾಜಿ ಮುಖ್ಯಸ್ಥ ರಾಮಪತಿ ರಾಮ್ ತ್ರಿಪಾಠಿ, ಸಂಸದ ಹರೀಶ್ ದ್ವಿವೇದಿ, ಶಾಸಕ ರಾಮ್ ಚೌಧರಿ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಪೊಲೀಸ್ ಅಧೀಕ್ಷಕ ದಿಲೀಪ್ ಕುಮಾರ್ ನದಿಗೆ ಬಿದ್ದಿದ್ದಾರೆ.
ನದಿ ದಡದಿಂದ ಸ್ಪಲ್ಪ ದೂರದಲ್ಲೇ ಈ ಘಟನೆ ಸಂಭವಿಸಿರುವ ಕಾರಣ ಕೂಡಲೇ ಎಲ್ಲರನ್ನೂ ರಕ್ಷಿಸಲಾಗಿದೆ. ‘ಬೋಟ್ ಒಂದು ಕಡೆ ವಾಲಿದಾಗ ಅವರೆಲ್ಲ ದಡದ ಕಡೆ ಹಾರಲಾರಂಭಿಸಿದರು. ಘಟನೆಯಲ್ಲಿ ಯಾವುದೇ ರೀತಿಯ ಅವಘಡ ಸಂಭವಿಸಿಲ್ಲ’ ಎಂದು ಬಸ್ತಿಯ ಪೊಲೀಸ್ ಅಧೀಕ್ಷಕ ದಿಲೀಪ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
Comments are closed.