ರಾಷ್ಟ್ರೀಯ

ಪ್ರವಾಹ ಪೀಡಿತ ಕೇರಳಕ್ಕೆ ಕೇಂದ್ರ ಅಗತ್ಯವಿದ್ದಷ್ಟು ಪರಿಹಾರವನ್ನು ನೀಡದಿರುವುದಕ್ಕೆ ರಾಹುಲ್ ಗಾಂಧಿ ಆಕ್ರೋಶ

Pinterest LinkedIn Tumblr

ತಿರುವನಂತಪುರ: ಪ್ರವಾಹ ಪೀಡಿತ ಕೇರಳ ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಬೆಂಬಲ ನೀಡಬೇಕಿದ್ದು, ಇದು ಕೇರಳ ರಾಜ್ಯದ ಜನತೆಯ ದನಿಯಾಗಿದೆ. ಇದು ಅವರ ಹಕ್ಕೂ ಕೂಡ. ಆದರೆ, ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಿದ್ದಷ್ಟು ಪರಿಹಾರವನ್ನು ನೀಡದಿರುವುದಕ್ಕೆ ಬೇಸರವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ.

ಕೊಚ್ಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜನರಿಗೆ ಬೆಂಬಲ ನೀಡಲು ನಾನಿಲ್ಲಿಗೆ ಬಂದಿದ್ದೇನೆಯೇ ಹೊರತು ಪರಿಸ್ಥಿತಿಯನ್ನು ರಾಜಕೀಯ ಮಾಡುವುದಕ್ಕೆ ಅಲ್ಲ. ಪ್ರಕೃತಿ ವಿಕೋಪಕ್ಕೆ ಕಾರಣಗಳ ಕುರಿತು ನಾನು ಯಾವುದೇ ರೀತಿಯ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಕೇರಳ ರಾಜ್ಯಕ್ಕೆ ಮತ್ತಷ್ಟು ಪರಿಹಾರ ನೀಡಬೇಕೆಂಬ ಆಗ್ರಹಕ್ಕೆ ನಾನು ಬೆಂಬಲ ನೀಡುತ್ತೇನೆ. ಈ ಕೂಗು ಕೇರಳ ಜನರದ್ದಾಗಿದ್ದೂ, ಇದು ಅವರ ಹಕ್ಕು ಕೂಡ ಆಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಿರುವಷ್ಟು ಪರಿಹಾರ ಬಿಡುಗಡೆ ಮಾಡದಿರುವುದಕ್ಕೆ ನನಗೂ ಬೇಸರವಿದೆ.

ನಿರಾಶ್ರಿತರ ಹಲವು ಕೇಂದ್ರಗಳಿಗೆ ಮಂಗಳವಾರ ಭೇಟಿ ನೀಡಿದ್ದೆ. ಜನರ ಸಮಸ್ಯೆಗಳನ್ನು ಹಾಗೂ ಅವರ ನೋವುಗಳನ್ನು ಆಲಿಸಿದೆ. ಜನರ ಸಮಸ್ಯೆಗಳ ಕುರಿತು ಕೇರಳ ಮುಖ್ಯಮಂತ್ರಿಗಳ ಜೊತೆಗೂ ಮಾತುಕತೆ ನಡೆಸಿದ್ದೇನೆ. ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ಜನರ ಸಂಕಷ್ಟವನ್ನು ಸರ್ಕಾರ ಆಲಿಸುವುದು ಅತ್ಯಂತ ಮುಖ್ಯವಾಗಿದೆ. ಪರಿಹಾರಗಳು ಜನರಿಗೆ ಶೀಘ್ರಗತಿಯಲ್ಲಿ ತಲುಪಬೇಕು ಎಂದು ತಿಳಿಸಿದ್ದಾರೆ.

Comments are closed.