ರಾಷ್ಟ್ರೀಯ

ಎರಡನೆಯ ತರಗತಿ ವಿದ್ಯಾರ್ಥಿಗೆ ಥಳಿತ: ರಾಜ್ಯದ ಶಿಕ್ಷಕನಿಗೆ ಶಿಕ್ಷೆ ಎತ್ತಿ ಹಿಡಿದ ಸುಪ್ರೀಂ

Pinterest LinkedIn Tumblr


ಹೊಸದಿಲ್ಲಿ: ಎರಡನೆಯ ತರಗತಿ ವಿದ್ಯಾರ್ಥಿಗೆ ಥಳಿಸಿ ಎಡಗಣ್ಣಿನ ದೃಷ್ಟಿ ಕಳೆದುಕೊಳ್ಳಲು ಕಾರಣರಾಗಿದ್ದ ರಾಜ್ಯದ ಶಿಕ್ಷ ಕರಿಗೆ ಸುಪ್ರೀಂ ಕೋರ್ಟ್‌ನ ಮಹಿಳಾ ನ್ಯಾಯಪೀಠ ಶಿಕ್ಷೆಯನ್ನು ಎತ್ತಿ ಹಿಡಿದಿದೆ.

ನ್ಯಾಯಮೂರ್ತಿಗಳಾದ ಆರ್‌. ಭಾನುಮತಿ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ನ್ಯಾಯಪೀಠ, ಎರಡನೆಯ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ಆತನ ದೃಷ್ಟಿ ಕಳೆದುಕೊಳ್ಳಲು ಕಾರಣರಾದ ಪ್ರಕರಣದ ವಿಚಾರಣೆ ನಡೆಸಿತು.

ಸಮವಸ್ತ್ರ ಮತ್ತು ಶೂಗಳನ್ನು ಧರಿಸಿದ ಕಾರಣಕ್ಕೆ ಹೊಸಪೇಟೆಯ ರಾಣಿ ಚೆನ್ನಮ್ಮ ಶಾಲೆಯ ಶಿಕ್ಷ ಕ ಸಿ.ಆರ್‌. ಕಾರಿಯಪ್ಪ, ಎರಡನೇ ತರಗತಿ ವಿದ್ಯಾರ್ಥಿಗೆ ಕೋಲಿನಿಂದ ಥಳಿಸಿದ್ದರು. ಇದರಿಂದ ಆ ವಿದ್ಯಾರ್ಥಿಯ ಎಡಗಣ್ಣಿಗೆ ಗಾಯವಾಗಿತ್ತು. ಎರಡು ಶಸ್ತ್ರಚಿಕಿತ್ಸೆಗಳನ್ನು ನಡೆಸಿದ ಬಳಿಕವೂ ಆತನಿಗೆ ದೃಷ್ಟಿ ಮರಳಿಸಲು ಸಾಧ್ಯವಾಗಿರಲಿಲ್ಲ.

ಇದರ ವಿರುದ್ಧ ಪೋಷಕರು ದೂರು ನೀಡಿದ್ದರು. ಆರೋಪಿ ಶಿಕ್ಷ ಕರ ವಿರುದ್ಧದ ಆರೋಪಗಳನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು. ವಿದ್ಯಾರ್ಥಿ ಪೋಷಕರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಶಿಕ್ಷಕನನ್ನು ದೋಷಿ ಎಂದು ಪರಿಗಣಿಸಿದ್ದ ಹೈಕೋರ್ಟ್‌, ಐಪಿಸಿ ಸೆಕ್ಷ ನ್‌ 326ರ ಅಡಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಶಿಕ್ಷಕ ಕಾರಿಯಪ್ಪ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಮಹಿಳಾ ಪೀಠ ತಾನು ನಿರ್ದೋಷಿಯೆಂಬ ಆರೋಪಿಯ ವಾದವನ್ನು ತಿರಸ್ಕರಿಸಿತು. ಆದರೆ, ಹೈಕೋರ್ಟ್‌ ತೀರ್ಪನ್ನು ಮಾರ್ಪಡಿಸಿ, ಶಿಕ್ಷೆ ಪ್ರಮಾಣವನ್ನು ಎರಡು ವರ್ಷದಿಂದ ಒಂದು ವರ್ಷಕ್ಕೆ ತಗ್ಗಿಸಿತು. ಅಲ್ಲದೆ, 50 ಸಾವಿರ ರೂ. ದಂಡವನ್ನೂ ವಿಧಿಸಿದ ನ್ಯಾಯಮೂರ್ತಿಗಳು ಅದನ್ನು ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದರು.

Comments are closed.