ಚಂಡಿಗಡ: ಸಿಬಿಎಸ್ಇ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿದ್ದ 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ದುಷ್ಕರ್ಮಿಗಳನ್ನು ಹರ್ಯಾಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳವಳಕಾರಿ ಎಂದರೆ ಬಂಧಿತರ ಪೈಕಿ ಓರ್ವ ಸೇನಾ ಸಿಬಂದಿ ಸೇರಿದ್ದಾರೆ.ಮನೀಶ್ ಮತ್ತು ಪಂಕಜ್ ಎಂಬ ಇನ್ನಿಬ್ಬರು ಆರೋಪಿಗಳ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಕೋಚಿಂಗ್ ಕೇಂದ್ರಕ್ಕೆ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಮೂವರು ಯುವಕರ ಗುಂಪು, ಆಕೆಯನ್ನು ಅಪಹರಿಸಿ, ಹೊಲವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು.
ಘಟನೆ ಕುರಿತು ಬಿಜೆಪಿ ಆಡಳಿತವಿರುವ ಹರಿಯಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಿಎಂ ಮನೋಹರ್ ಲಾಲ್ ಕಟ್ಟರ್ ಅವರ ರಾಜೀನಾಮೆಗೂ ಆಗ್ರಹಿಸಲಾಗಿತ್ತು.
Comments are closed.