ರಾಷ್ಟ್ರೀಯ

ದೇಶದಾದ್ಯಂತ 150ನೇ ಗಾಂಧಿ ಜಯಂತಿ : ರಾಜ್’ಘಾಟ್’ನಲ್ಲಿ ರಾಷ್ಟ್ರಪಿತರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ , ರಾಹುಲ್

Pinterest LinkedIn Tumblr

ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಯವರ 150ನೇ ವರ್ಷಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಧಾನಿ ದೆಹಲಿಯ ರಾಜ್’ಘಾಟ್’ಗೆ ಭೇಟಿ ನೀಡಿ ಬಾಪೂಜಿಯವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಇಂದು ಬೆಳಿಗ್ಗೆ ರಾಜ್’ಘಾಟ್’ಗೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಬಿಜೆಪಿ ಹಿರಿಯ ನಾಯಕರೂ ಕೂಡ ಪುಷ್ಪನಮನ ಸಲ್ಲಿಸಿದರು.

ಇದರಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.

ಇಂದು ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹುಟ್ಟುಹಬ್ಬವೂ ಆಗಿದ್ದು, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕಕ್ಕೂ ಮೋದಿ ಹಾಗೂ ರಾಷ್ಟ್ರಪತಿಗಳು ಪುಷ್ಪ ನಮನ ಸಲ್ಲಿಸಿದರು.

ರಾಷ್ಟ್ರಪಿತ ಗಾಂಧೀಜಿ ಹಾಗೂ ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿಯೂ ಪ್ರಧಾನಿ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

Comments are closed.