ಛತ್ತೀಸ್ ಗಡ್: ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿರುವ ಛತ್ತಿಸ್ಗಢ್ ದಲ್ಲಿ ಕಾಂಗ್ರೆಸ್ಗೆ ಭಾರೀ ಆಘಾತ ಉಂಟುಮಾಡಿದೆ. ಇನ್ನೇನು ಚುನಾವಣೆಗೆ ಎರಡು ತಿಂಗಳು ಬಾಕಿ ಇದೆ ಎನ್ನುವ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷ ರಾಮ್ದಯಾಳ್ ಯೂಕಿ ಬಿಜೆಪಿ ಸೇರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಚುನಾವಣಾ ಪ್ರಚಾರದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ರಮಣ್ ಸಿಂಗ್ ನೇತೃತ್ವದಲ್ಲಿ ಯೂಕಿ ಇಂದು ಬಿಜೆಪಿ ಸೇರಿದ್ದಾರೆ.
ಈ ದಿಢೀರ್ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಛತ್ತೀಸ್ಗಢ್ ಕಾಂಗ್ರೆಸ್ ಮುಖ್ಯಸ್ಥ ಭುಪೇಶ್ ಬಂಗೇಲ್, ಕೆಲವು ದಿನಗಳ ಹಿಂದೆ ನಾವು ರಾಮ್ದೆ ಅವರನ್ನು ಭೇಟಿಯಾಗಿದ್ದೇವು. ಆದರೆ, ಅವರು ಏನನ್ನು ತಿಳಿಸಲಿಲ್ಲ. ಚುನಾವಣೆ ಸಮಯದಲ್ಲಿ ಪಕ್ಷಾಂತರ ಹೊಸದಲ್ಲ ಎಂದಿದ್ದಾರೆ.
ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ರಾಹುಲ್ ಗಾಂಧಿ ನೇತೃತ್ವದ ಸಮಿತಿ ಅಂತಿಮ ಪಡಿಸಿದ್ದು, ಇನ್ನೇರಡು ದಿನಗಳಲ್ಲಿ ಹೆಸರುಗಳು ಪ್ರಕಟವಾಗಲಿವೆ. ಈ ನಡುವೆ ಈ ಬೆಳವಣಿಗೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರದಿಂದ ಬಿಜೆಪಿ ಮುಖ್ಯಸ್ಥ ಅಮಿತ್ ಶಾ ರಾಜ್ಯದಲ್ಲಿ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ನಾಲ್ಕೂ ಬಾರಿ ಶಾಸಕರಾಗಿರುವ ಯೂಕಿ 2000ದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು.
ಕಳೆದೆರಡು ದಿನಗಳ ಹಿಂದೆಯಷ್ಟೇ ತೆಲಂಗಾಣದಲ್ಲಿಕೂಡ ಸಾಮಾಜಿಕ ಕಾರ್ಯಕರ್ತೆ ಪದ್ಮಿನಿ ರೆಡ್ಡಿ ಬಿಜೆಪಿ ಸೇರಿದ ಕೆಲವು ಗಂಟೆಗಳಲ್ಲೇ ಪಕ್ಷವನ್ನು ತೊರೆದಿದ್ದರು.
Comments are closed.