ಶಬರಿಮಲೆ: ಅಯ್ಯಪ್ಪ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರು. ಈವರೆಗೂ ಯಾವುದೇ ಮಹಿಳೆಯರು ಪ್ರವೇಶ ಪಡೆಯಲು ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ದೇವಸ್ವಂ ಮಂಡಳಿ ಈ ಆದೇಶ ಜಾರಿಗೆ ತರಲು ಇನ್ನು ಸ್ವಲ್ಪ ದಿನ ಸಮಯಬೇಕಿದೆ ಎಂದು ಕಾಲಾವಕಾಶ ಕೋರಿ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದೆ. ನ್ಯಾಯಾಲಯದ ಆದೇಶವನ್ನು ಜಾರಿಗೆ ತರುವಲ್ಲಿ ಮಂಡಳಿ ವಿಫಲವಾಗಿದ್ದು, ಮಹಿಳೆಯರ ಪ್ರವೇಶಕ್ಕೆ ನಿರಾಕರಿಸಿ ಮಂಡಳಿ ಕೂಡ ಪ್ರತಿಭಟನೆ ನಡೆಸಿದೆ.
ಸೆ. 28ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ ಇದು ಮೂರನೇ ಬಾರಿ ದೇವಾಲಯ ಬಾಗಿಲು ತೆರೆದಿದ್ದು, ಇದುವರೆಗೂ 50 ವರ್ಷ ವಯೋಮಾನ ಒಳಗಿನ ಒಬ್ಬ ಮಹಿಳೆ ಕೂಡ ಪ್ರವೇಶ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಈ ಹಿಂದೆ ಎರಡು ಬಾರಿ ಬಾಗಿಲು ತೆಗೆದಾಗಲು ಮಹಿಳೆಯರು ಪ್ರವೇಶಕ್ಕೆ ಮುಂದಾಗಿದ್ದರು. ಆದರೆ ಬಲಪಂಥೀಯ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದವು. ಅಲ್ಲದೇ ದೇವಾಲಯದ ತಂತ್ರಿ ಕೂಡ ಮಹಿಳೆಯರು ದೇವಾಲಯ ಪ್ರವೇಶಿಸಿದರೆ, ಬಾಗಿಲು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಸುಪ್ರೀಂ ತೀರ್ಪಿನ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಕೂಡ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು ಆದರೆ, ಈ ಅರ್ಜಿಯನ್ನು ಜ.22ಕ್ಕೆ ನ್ಯಾಯಾಲಯ ಮುಂದೂಡಿತು.
Comments are closed.