ನವದೆಹಲಿ: ನಾಗರಿಕ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮರಣೋತ್ತರವಾಗಿ ಗಾಯಕ ಭೂಪೇನ್ ಹಜಾರಿಕಾ ಅವರಿಗೆ ಕೇಂದ್ರ ಸರ್ಕಾರ ನೀಡಿದ್ದ ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ಹಜಾರಿಕಾ ಕುಟುಂಬ ನಿರಾಕರಿಸಿದೆ.
ಕಳೆದ ಜನವರಿ 26ರಂದು ಕೇಂದ್ರ ಸರ್ಕಾರ ಭೂಪೇನ್ ಹಜಾರಿಕಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಹೆಸರನ್ನು ಘೋಷಿಸಿತ್ತು. ಇದೀಗ ಗೌರವವನ್ನು ಹಜಾರಿಕಾ ಕುಟುಂಬ ನಿರಾಕರಿಸಿರುವುದು ಪ್ರಧಾನಿ ಮೋದಿ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.
ಅಮೆರಿಕದಲ್ಲಿ ನೆಲೆಸಿರುವ ಹಜಾರಿಕಾ ಅವರ ಮಗ ತೇಜ್, ಇಂದು ಅಸ್ಸಾಂ ಸ್ಥಳೀಯ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಪ್ರಸ್ತುತ ರಾಜ್ಯದ ವಿದ್ಯಮಾನಗಳಿಂದ ಭಾರತ ರತ್ನ ಪ್ರಶಸ್ತಿಯನ್ನು ನಿರಾಕರಿಸುತ್ತಿರುವುದಾಗಿ ತಿಳಿಸಿದ್ದಾರೆ.
ಪ್ರಶಸ್ತಿ ಘೋಷಣೆಯಾದ ಸಂದರ್ಭದಲ್ಲಿ ತೇಜ್ ಅವರು ವೈವಿಧ್ಯತೆಗೆ ಸಿಕ್ಕ ಗೆಲುವು ಎಂದು ಹೇಳಿದ್ದರು. ತೇಜ್ ಅವರು ಲೇಖಕ ಮತ್ತು ಪಬ್ಲಿಷರ್ ಆಗಿದ್ದು, ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ.
Comments are closed.