ರಾಷ್ಟ್ರೀಯ

ಪುಲ್ವಾಮಾ ದಾಳಿಯ ಸೂತ್ರದಾರ ಅಬ್ದುಲ್ ಹತ್ಯೆ

Pinterest LinkedIn Tumblr


ಶ್ರೀನಗರ: ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಮೇಲೆ ಉಗ್ರರು ನಡೆಸಿದ ದಾಳಿಗೆ ಭಾರತ ಮೊದಲ ಪ್ರತೀಕಾರ ತೀರಿಸಿಕೊಂಡಿದೆ. ಕಣಿವೆ ರಾಜ್ಯದಲ್ಲಿ ಸತತ 19 ಗಂಟೆಗಳ ಕಾರ್ಯಾಚರಣೆ ನಡೆಸಿ ಅಬ್ದುಲ್​ ರಶೀದ್​​​ ಘಾಜಿ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಈ ವೇಳೆ ನಾಲ್ಕು ಯೋಧರು ಹುತಾತ್ಮರಾಗಿದ್ದಾರೆ.

ಜೈಷ್​-ಇ-ಮೊಹ್ಮದ್​ ಭಯೋತ್ಪಾದನಾ ಸಂಘಟನೆಯ ಕಮಾಂಡರ್​ ಆಗಿರುವ ಅಬ್ದುಲ್ ರಶೀದ್​ ಪುಲ್ವಾಮಾ ದಾಳಿಯ ಮಾಸ್ಟರ್​ ಮೈಂಡ್​ ಆಗಿದ್ದ. ಬಾಂಬ್​ ತಯಾರಿಕೆಯಲ್ಲಿ ಈತನದ್ದು ಎತ್ತಿದ ಕೈ. ಜೆಇಎಂ ಮುಖ್ಯಸ್ಥ ಮಸೂದ್​ ಅಜರ್​ನ ನಂಬಿಕಸ್ತ ಬಂಟನಾಗಿದ್ದ. ಈಗ ಈತನ್ನು ಹೊಡೆದುರುಳಿಸುವ ಮೂಲಕ ಮುಂದಾಗಬಹುದಾದ ದೊಡ್ಡ ಅಪಾಯವನ್ನು ಸೇನೆ ತಪ್ಪಿಸಿದೆ. ರಶೀದ್​​​ ಘಾಜಿ ಜೊತೆ ಇದ್ದ ಕುಮ್ರಾನ್​ ಕುಜ್ಜರ್​ನನ್ನು ಯೋಧರು ಕೊಂದು ಹಾಕಿದ್ದಾರೆ. ಗುರುವಾರ ನಡೆದ ಭಾರತೀಯ ಸೇನೆ ಮೇಲೆ ನಡೆದ ದಾಳಿ ಪ್ರದೇಶದಿಂದ ಕೇವಲ 10 ಕಿ.ಮೀ. ದೂರದಲ್ಲಿ ಇವರು ಅಡಗಿಕೊಂಡಿದ್ದರು.

ಪಿಂಗ್ಲಾನ್​ ಭಾಗದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆ ಭಾರತೀಯ ಸೇನೆ ಭಾನುವಾರ ಕಾರ್ಯಾಚರಣೆಗೆ ಇಳಿದಿತ್ತು. ಸತತ 19 ಗಂಟೆಗಳ ಕಾಲ ಕಾರ್ಯಾಚರಣೆ ಮುಂದುವರಿದಿತ್ತು. ಸೋಮವಾರ ಬೆಳಗಿನಜಾವ ಉಗ್ರರು ಹಾಗೂ ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಉಗ್ರರು ಅಡಗಿದ್ದ ಪ್ರದೇಶವನ್ನು ಸೈನಿಕರು ಸಂಪೂರ್ಣವಾಗಿ ಸುತ್ತುವರೆದಿದ್ದರು. ಕೊನೆಗೂ ಅವರನ್ನು ಹತ್ಯೆ ಮಾಡಲು ಸೇನೆ ಯಶಸ್ವಿಯಾಗಿದೆ. ಕಾರ್ಯಾಚರಣೆಯಲ್ಲಿ 4 ಸೈನಿಕರು ಹುತಾತ್ಮರಾಗಿದ್ದಾರೆ. ಕೆಲ ಯೋಧರಿಗೆ ಗಾಯಗಳಾಗಿವೆ.

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೊರ ಪ್ರದೇಶದಲ್ಲಿ ಭಯೋತ್ಪಾದಕರು ಕಳೆದ ಗುರುವಾರ ಭೀಕರ ಬಾಂಬ್​ ದಾಳಿ ನಡೆಸಿದ್ದರು. ಈ ವೇಳೆ ಮದ್ದೂರಿನ ಗುರು ಹೆಸರಿನ ಯೋಧ ಸೇರಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಘಟನೆಯಲ್ಲಿ 40ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದರು. 20 ವರ್ಷಗಳಲ್ಲಿ ನಡೆದ ದಾಳಿಗಳಲ್ಲಿ ಅತೀ ದೊಡ್ಡ ದಾಳಿ ಇದಾಗಿದೆ.

ಸ್ಕಾರ್ಪಿಯೋ ಕಾರಿನಲ್ಲಿ ಬಂದ ಆತ್ಮಾಹುತಿ ಉಗ್ರ ಸುಮಾರು 350 ಕೆ.ಜಿ.ಯ ಸುಧಾರಿತ ಸ್ಫೋಟಕವನ್ನು ಸಿಆರ್​ಪಿಎಫ್​ ಯೋಧರು ಇದ್ದ ಸ್ಥಳದಲ್ಲಿ ಸ್ಫೋಟಿಸಿದ್ದರು. 2001ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯಲ್ಲಿ ನಡೆದ ಕಾರ್​ ಬಾಂಬ್​ ಸ್ಫೋಟದ ನಂತರ ನಡೆದ ಅತ್ಯಂತ ಕೆಟ್ಟ ದಾಳಿ ಇದಾಗಿದೆ. ಜೈಶ್​ ಎ ಮೊಹಮ್ಮದ್​ ಉಗ್ರ ಸಂಘಟನೆ ಈ ದಾಳಿ ಜವಾಬ್ದಾರಿ ಹೊತ್ತುಕೊಂಡಿದೆ.

Comments are closed.