ನವದೆಹಲಿ: ಎರಿಕ್ಸನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಸಂಸ್ಥೆಯ ಅನಿಲ್ ಅಂಬಾನಿಗೆ ಸುಪ್ರೀಂ ಕೋರ್ಟ್ ನಲ್ಲಿ ಭಾರೀ ಮುಖಭಂಗವಾಗಿದೆ.
ಎರಿಕ್ಸನ್ ಗೆ ರಿಲಾಯನ್ಸ್ ಗ್ರೂಪ್ 550 ಕೋಟಿ ರು. ಹಣ ನೀಡಬೇಕಾಗಿದ್ದು, ಕೂಡಲೇ 4 ವಾರದಲ್ಲಿ ಹಣವನ್ನು ಪಾವತಿಸುವಂತೆ ಅನಿಲ್ ಅಂಬಾನಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ನಾಲ್ಕು ವಾರದಲ್ಲಿ ರೂ.ಹಣ ಹಿಂದಿರುಗಿಸಿ ಅಥವಾ ಜೈಲು ಶಿಕ್ಷೆ ಅನುಭವಿಸಿ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಆದೇಶಿಸಿದೆ.
ಎರಿಕ್ಸನ್ ಪ್ರಕರಣದಲ್ಲಿ ಅನಿಲ್ ಅಂಬಾನಿ ನ್ಯಾಯಾಂಗ ನಿಂದನೆ ಮಾಡಿರುವುದು ಸ್ಪಷ್ಟವಾಗಿದೆ. ಈ ಕೂಡಲೇ ಅವರು ಹಣ ಹಿಂದಿರುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್ ಕಂಪನಿ ಉದ್ದೇಶಪೂರ್ವಕವಾಗಿ ಹಣ ಹಿಂದಿರುಗಿಸಿಲ್ಲ. ಈ ಹಿಂದೆ ಸೂಚನೆ ನೀಡಿದ್ದರು ಅದನ್ನು ಪಾಲಿಸಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ಗಮನ ಸೆಳೆದಿದೆ.
Comments are closed.