ರಾಷ್ಟ್ರೀಯ

300 ಉಗ್ರರು ಹತ್ಯೆಯಾಗಿದ್ದಾರೆ ಎಂದು ಮೋದಿ ಹೇಳಿದ್ದಾರೆಯೇ?- ಕೇಂದ್ರ ಸಚಿವ ಅಹ್ಲುವಾಲಿಯಾ

Pinterest LinkedIn Tumblr


ನವದೆಹಲಿ: ಪಾಕಿಸ್ತಾನದ ಬಲಾಕೋಟ್ ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಎಂ) ತರಬೇತಿ ಶಿಬಿರದಲ್ಲಿ ಮೇಲೆ ನಡೆದ ಭಾರತದ ವಾಯುಸೇನೆಯ ದಾಳಿಯಿಂದ 300 ಭಯೋತ್ಪಾದಕರನ್ನು ಹತ್ಯೆಯಾಗಿದ್ದಾರೆ ಎನ್ನುವ ಮಾಧ್ಯಮ ವರದಿಗಳನ್ನು ಕೇಂದ್ರ ಸಚಿವ ಎಸ್.ಎಸ್. ಅಹ್ಲುವಾಲಿಯಾ ನಿರಾಕರಿಸಿದ್ದಾರೆ. ಇನ್ನು ಮುಂದುವರೆದು ಈ ಕುರಿತಾಗಿ ಎಂದಾದರೋ ಪ್ರಧಾನಿ ನರೇಂದ್ರ ಮೋದಿ ಅಥವಾ ಅಮಿತ್ ಷಾ ಹೇಳಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

“ನಾನು ಭಾರತೀಯ ಮತ್ತು ಅಂತರರಾಷ್ಟ್ರೀಯ ಮಾಧ್ಯಮಗಳನ್ನು ಫಾಲೋ ಮಾಡಿದ್ದೇನೆ. ವಾಯು ಪಡೆಗಳ ದಾಳಿ ನಂತರ ಪ್ರಧಾನಿ ಮೋದಿ ಅವರ ಭಾಷಣವನ್ನು ಸಹ ಕೇಳಿದ್ದೇನೆ. ಅವರು ಎಂದಾದರೂ 300 ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಿದ್ದಾರಾ? ಬಿಜೆಪಿ ಯಾವುದೇ ವಕ್ತಾರರು ಇದನ್ನು ದೃಢೀಕರಿಸಿದ್ದಾರಾ? ಅಮಿತ್ ಷಾ ರಂತವರು ಅಂತಹ ವಿಷಯ ಹೇಳಿದ್ದಾರಾ? ಅವರ ಬಾಗಿಲಿನಲ್ಲಿ ಬಾಂಬ್ ಹಾಕುವುದರ ಮೂಲಕ ಅವರನ್ನು ನಾಶ ಪಡಿಸುವ ಸಾಮರ್ಥ್ಯವಿರುವ ಸಂದೇಶವೊಂದನ್ನು ಕಳುಹಿಸಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಅಹ್ಲುವಾಲಿಯಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮಾಧ್ಯಮಗಳಲ್ಲಿ ಜೈಶ್ ಮುಖ್ಯಸ್ಥ ಮಸೂದ್ ಅಝರ್ ಅವರ ಸೋದರ ಸೇರಿದಂತೆ ಸುಮಾರು 300 ಭಯೋತ್ಪಾದಕರು ವಾಯುಪಡೆ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎನ್ನುವ ವರದಿ ಬಂದ ನಂತರ ಸಚಿವರು ಸ್ಪಷ್ಟಪಡಿಸಿದ್ದಾರೆ. ಈಗ ಸಚಿವರ ಹೇಳಿಕೆಗೆ ಸಿಪಿಎಂ ಮೋದಿ ಸರ್ಕಾರವನ್ನು ವ್ಯಂಗವಾಡಿದೆ. ಈಗ ಈ ಹಿಂದಿನ ಹೇಳಿಕೆಯಿಂದ ಸರ್ಕಾರ ಈಗ ಯು-ಟರ್ನ್ ತೆಗೆದುಕೊಳ್ಳುತ್ತಿದೆಯೆ ಎಂದು ಅದು ಪ್ರಶ್ನಿಸಿದೆ.

Comments are closed.