ರಾಷ್ಟ್ರೀಯ

ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಶಶಿ ತರೂರ್’ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಚಿವೆ ನಿರ್ಮಲಾ ಸೀತಾರಾಮನ್

Pinterest LinkedIn Tumblr

ತಿರುವನಂತಪುರಂ: ತುಲಾಭಾರ ಸೇವೆ ನೆರವೇರಿಸುವಾಗ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಶಿ ತರೂರ್ ಆರೋಗ್ಯವನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿಚಾರಿಸಿದ್ದಾರೆ.

ರಕ್ಷಣಾ ಸಚಿವರು ಆಸ್ಪತ್ರೆಗೆ ಭೇಟಿ ನೀಡಿದ್ದರ ಬಗ್ಗೆ ಟ್ವೀಟ್ ಮಾಡಿರುವ ಶಶಿ ತರೂರ್, ಸೌಜನ್ಯದ ರಾಜಕೀಯದಲ್ಲಿ ಅಪರೂಪವಾಗಿ ಕಾಣಬಹುದಾದ ಸದ್ಗುಣವಾಗಿದೆ ಎಂದು ಹೇಳಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರ ನಡೆ ಹೃದಯಸ್ಪರ್ಶಿಯಾಗಿತ್ತು. ಕೇರಳದಲ್ಲಿ ಬಿರುಸಿನ ಚುನಾವಣಾ ಕೆಲಸಗಳ ನಡುವೆಯೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು ಎಂದು ಟ್ವಿಟರ್ ನಲಿ ಶಶಿ ತರೂರ್ ಹೇಳಿದ್ದಾರೆ.

ಸಾಂಪ್ರದಾಯಿಕ ಹೊಸ ವರ್ಷಾಚರಣೆ ಹಬ್ಬವಾಗಿರುವ ವಿಷು ಸಂಭ್ರಮದ ಕಾರಣ ಶಶಿ ತರೂರ್ ಪ್ರಸಿದ್ದ ಗಾಂಧಾರಿ ಅಮ್ಮ ನ್ ದೇವಸ್ಥಾನಕ್ಕೆ ತೆರಳಿದ್ದಾರೆ. ಅಲ್ಲಿ ಅವರು ತುಲಾಭಾರ ಸೇವೆ ನೆರವೇರಿಸಲು ಮುಂದಾದಾಗ ತುಲಾಭಾರಕ್ಕಾಗಿ ಹಾಕಲಾಗಿದ್ದ ತಕ್ಕಡಿಯ ಕಬ್ಬಿಣದ ಸರಪಣಿಗಳು ತುಂಡಾಗಿ ಅವರ ತಲೆ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Comments are closed.