ರಾಷ್ಟ್ರೀಯ

ಹುತಾತ್ಮ ಕರ್ಕರೆ ಬಗ್ಗೆ ಹೇಳಿಕೆ; ಭೋಪಾಲ್ ಬಿಜೆಪಿಯ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಗೆ ಚುನಾವಣಾ ಆಯೋಗದಿಂದ ನೊಟೀಸ್

Pinterest LinkedIn Tumblr

ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಠಾಕೂರ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿಗೊಳಿಸಿದೆ.

26/11 ಉಗ್ರ ದಾಳಿಯಲ್ಲಿ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಬಗ್ಗೆ ಸಾಧ್ವಿ ಪ್ರಗ್ಯಾ ಠಾಕೂರ್ ನೀಡಿದ್ದ ಹೇಳಿಕೆ ವಿವಾದ ಉಂಟುಮಾಡಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಾಧ್ವಿ ಪ್ರಗ್ಯಾ ಠಾಕೂರ್ ಗೆ ನೊಟೀಸ್ ನೀಡಿದೆ.

ಮುಂಬೈ ದಾಳಿಯಲ್ಲಿ ಹುತಾತ್ಮರಾದ ಮಹಾರಾಷ್ಟ್ರ ಎ.ಟಿ.ಎಸ್‌. ಮುಖ್ಯಸ್ಥ ಹೇಮಂತ ಕರ್ಕರೆ ಅವರಿಗೆ ನಾನು ಶಾಪ ಹಾಕಿದ್ದೆ. ನನ್ನ ಶಾಪದಿಂದ ಹಾಗೂ ಅವರ ಕರ್ಮದಿಂದ ಮೃತಪಟ್ಟಿದ್ದಾರೆ ಎಂದು ಸಾಧ್ವಿ ಪ್ರಗ್ಯಾ ಠಾಕೂರ್ ಹೇಳಿದ್ದರು. ಈ ಸಂಬಂಧ ಪ್ರಗ್ಯಾ ಸಿಂಗ್ ಠಾಕೂರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು.

Comments are closed.