ರಾಷ್ಟ್ರೀಯ

ದೆಹಲಿಯಲ್ಲಿ ರಾಜ್ಯ ಮೈತ್ರಿ ನಾಯಕರ ಚರ್ಚೆ

Pinterest LinkedIn Tumblr


ದೆಹಲಿ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ವೇಳೆ ಹೆಚ್.ಡಿ.ಕುಮಾರಸ್ವಾಮಿಗೆ ಸಚಿವರಾದ ಬಂಡೆಪ್ಪ ಕಾಶಂಪೂರ್, ಸಾ.ರಾ.ಮಹೇಶ್ ಸಾಥ್ ನೀಡಿದರು.

ಲೋಕಸಭೆ ಚುನಾವಣೆ ಫಲಿತಾಂಶ, ರಾಜ್ಯ ರಾಜಕಾರಣ ಸ್ಥಿತಿಗತಿ ಕುರಿತು ಚರ್ಚೆ ನಡೆಸಿದ ನಾಯಕರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್ ನಾಯಕರು ಅತ್ಯುತ್ತಮವಾಗಿ ಸಹಕಾರ ನೀಡುತ್ತಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ರಾಹುಲ್ ಗಾಂಧಿಗೆ ವಿವರಿಸಿದರು.

ಅಲ್ಲದೇ, ರಾಷ್ಟ್ರ ರಾಜಕಾರಣಕ್ಕೆ ನಿಮ್ಮ ಅಗತ್ಯವಿದೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ರಾಹುಲ್ ಗಾಂಧಿಗೆ ಸಿಎಂ ಕುಮಾರಸ್ವಾಮಿ ಮನವಿ ಮಾಡಿದರು.

Comments are closed.