ಕೋಲ್ಕತ್ತಾ (ಜೂ 9): ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆಯುತ್ತಿರುವ ಘರ್ಷಣೆ ಪೂರ್ಣಗೊಳ್ಳುವ ಲಕ್ಷಣ ಗೋಚರವಾಗುತ್ತಿಲ್ಲ. ಶನಿವಾರ ಸಂಜೆ ಮತ್ತೆ ಹಿಂಸಾಚಾರ ನಡೆದಿದ್ದು, ಓರ್ವ ಟಿಎಂಸಿ ಹಾಗೂ ಇಬ್ಬರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ.
24 ಪರ್ಗಣಾಸ್ ಜಿಲ್ಲೆಯ ನಜ್ಯಾತ್ನಲ್ಲಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ. ಸಾರ್ವಜನಿಕ ಪ್ರದೇಶದಲ್ಲಿದ್ದ ಪಕ್ಷದ ಬಾವುಟ ಕೆಳಗಿಳಿಸಿದ ವಿಚಾರಕ್ಕೆ ಸಂಬಂಧಿಸಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಜಟಾಪಟಿ ನಡೆದಿತ್ತು. ನಂತರ ಅದು ಹಿಂಸಾಚಾರಕ್ಕೆ ತಿರುಗಿದೆ.
ಪೊಲೀಸ್ ಪಡೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸು ಪ್ರಯತ್ನಿಸಿದ್ದಾರೆ. ಈ ಭಾಗದಲ್ಲಿ ಮತ್ತೆ ಹಿಂಸಾಚಾರ ಸಂಭವಿಸುವ ಲಕ್ಷಣ ಗೋಚರವಾಗಿದ್ದು, ಹೆಚ್ಚಿನ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಅಮಿತ್ ಶಾ ವರದಿ ತರಿಸಿಕೊಂಡಿದ್ದಾರೆ.
ಪಶ್ಚಿಮ ಬಂಗಾಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನ ಗಳಿಸುವು ಮೂಲಕ ಇತಿಹಾಸ ನಿರ್ಮಿಸಿತ್ತು. ಇದು ಟಿಎಂಸಿ ಅಸಮಾಧಾನಕ್ಕೆ ಕಾರಣವಾಗಿತ್ತು. ಹಾಗಾಗಿ ಚುನಾವಣಾ ಫಲಿತಾಂಶದ ನಂತರ ನಿರಂತವಾಗಿ ಘರ್ಷಣೆಗಳು ನಡೆಯುತ್ತಲೇ ಇವೆ.
Comments are closed.