ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಆಂಧ್ರ ಪ್ರದೇಶದ ರಾಜ್ಯಪಾಲರಾಗಿ ಆಯ್ಕೆಯಾಗಿದ್ದಾರೆ ಎಂದು ಕೇಂದ್ರ ಸಚಿವ ಹರ್ಷ ವರ್ಧನ್ ಟ್ವೀಟ್ ಮೂಲಕ ಬಹಿರಂಗಪಡಿಸಿ ಶುಭಕೋರಿದ್ದರು. ಆದ್ರೆ ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.
2014ರ ಮೋದಿ ಸರ್ಕಾರದಲ್ಲಿ ಸುಷ್ಮಾ ಸ್ವರಾಜ್ ಕೇಂದ್ರ ಸಚಿವೆಯಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಚುನಾವಣೆಯಿಂದ ದೂರ ಉಳಿದುಕೊಂಡಿದ್ದ ಸುಷ್ಮಾ ಸ್ವರಾಜ್ ಸಂಪುಟದಿಂದಲೂ ಹೊರ ಬಂದು ಸಂಪೂರ್ಣ ವಿಶ್ರಾಂತಿಯಲ್ಲಿದ್ದಾರೆ. ಇ.ಎಸ್.ಎಲ್.ನರಸಿಂಹನ್ ಆಂಧ್ರ ಪ್ರದೇಶದ ರಾಜ್ಯಪಾಲರಾಗಿದ್ದಾರೆ.
ಕೇಂದ್ರದಲ್ಲಿ ಹೊಸ ಸರ್ಕಾರ ರಚನೆ ಮಾಡಿರುವ ಬಿಜೆಪಿ ರಾಜ್ಯಪಾಲರಗಳನ್ನು ಬದಲಾಯಿಸಲು ಮುಂದಾಗುತ್ತಿದೆ ಎಂಬ ಮಾತುಗಳು ದೆಹಲಿ ಅಂಗಳದಲ್ಲಿ ಹರಿದಾಡುತ್ತಿವೆ. ಕರ್ನಾಟಕದಲ್ಲಿ ವಜೂಬಾಯಿ ವಾಲಾರನ್ನು ಬದಲಿಸುವ ಬಿಜೆಪಿ ಪಡಸಾಲೆಯಲ್ಲಿ ಚರ್ಚೆಗಳು ನಡೆದಿವೆ.
Comments are closed.