ರಾಷ್ಟ್ರೀಯ

ಮಾನನಷ್ಟ ಮೊಕದ್ದಮೆ ಕೈ ಬಿಟ್ಟ ನ್ಯಾಯಾಲಯ; ರಾಹುಲ್ ಗಾಂಧಿಗೆ ಬಿಗ್ ರಿಲೀಫ್

Pinterest LinkedIn Tumblr

ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮುಂಬೈಯ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಈ ಮೂಲಕ ರಾಹುಲ್ ಗಾಂಧಿಗೆ ಕೇಸಿನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.

15 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್‌ ನ್ಯಾಯಾಲಯಕ್ಕೆ ಪಾವತಿಸಿ ರಾಹುಲ್ ಗಾಂಧಿಯವರಿಗೆ ನ್ಯಾಯಾಲಯ ಆರೋಪ ಮುಕ್ತಗೊಳಿಸಿದ್ದು ಮಾಜಿ ಸಂಸದ ಏಕನಾಥ್ ಗಾಯಕ್ ವಾಡ್ ರಾಹುಲ್ ಗಾಂಧಿಯವರಿಗೆ ಶ್ಯೂರಿಟಿ ನೀಡಿದರು.

ಇಂದು ಬೆಳಗ್ಗೆ ಮುಂಬೈಯ ಶಿವಡಿ ಕೋರ್ಟ್ ಗೆ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ ಮತ್ತವರ ವಕೀಲರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾದರು. ಚುನಾವಣೆ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕರನ್ನು ಟೀಕಿಸುವಾಗ ರಾಹುಲ್ ಗಾಂಧಿಯವರು ಹೀಗೆ ಹೇಳಿದ್ದು, ಗೌರಿ ಲಂಕೇಶ್ ಹತ್ಯೆಗೆ ಬಿಜೆಪಿ-ಆರ್ ಎಸ್ಎಸ್ ಸಿದ್ದಾಂತಗಳು ಮತ್ತು ಅವುಗಳನ್ನು ಹಿಂಬಾಲಿಸುವವರು ಕಾರಣ ಎಂದು ಹೇಳಿದ್ದರಷ್ಟೆ ಹೊರತು ಇಂತವರೇ ಹತ್ಯೆಗೆ ಕಾರಣ ಎಂದು ಹೇಳಿಲ್ಲ. ಯಾವೊಬ್ಬ ವ್ಯಕ್ತಿಯ ಮೇಲೆ ನಿರ್ದಿಷ್ಟ ಆರೋಪ ಮಾಡಿಲ್ಲ,ಹೀಗಾಗಿ ಅವರ ವಿರುದ್ಧ ಕೇಸು ದಾಖಲಿಸುವ ಯಾವುದೇ ನಿರ್ದಿಷ್ಟ ಗುರುತರ ಸಾಕ್ಷಿಗಳಿಲ್ಲ ಎಂದು ಹೇಳಿ ನ್ಯಾಯಾಲಯ ಅವರನ್ನು ಆರೋಪ ಮುಕ್ತಗೊಳಿಸಿದೆ.

Comments are closed.