ಹಲವು ವರ್ಷಗಳಿಂದ ಪುರುಷರ ಶೋಷಣೆಗೆ ಒಳಗಾಗಿದ್ದ ಮುಸ್ಲಿಂ ಮಹಿಳೆಯರಿಗೆ ಇದೀಗಾ ನ್ಯಾಯ ದೊರೆತಿದೆ. ಹೌದು ಕೇಂದ್ರ ಸರ್ಕಾರ ಬಹುನಿರೀಕ್ಷಿತ ತ್ರಿವಳಿ ತಲಾಕ್ ಮಸೂದೆಗೆ ಕೊನೆಗೂ ಅನುಮೋದನೆ ದೊರೆತಿದೆ.
ತ್ರಿವಳಿ ತಲಾಖ್ ನಿಷೇಧ ವಿಧೇಯಕವನ್ನು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಇಂದು ರಾಜ್ಯ ಸಭೆಯಲ್ಲಿ ಮಂಡಿಸಿದ್ದು. ಕೊನೆಗೂ ತ್ರಿವಳಿ ತಲಾಕ್ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತ್ರಿವಳಿ ತಲಾಕ್ ನಿಷೇಧ ಸುಗ್ರೀವಾಜ್ಞೆಗೆ ಗ್ರೀನ್ ಸಿಗ್ನಲ್ ನೀಡಿದೆ. ಇನ್ನೂ ಈ ಮಸೂದೆಗೆ ರಾಷ್ಟ್ರಪತಿ ಅಂಗೀಕಾರ ಒಂದೇ ಬಾಕಿ ಇದೆ.
ಈ ಹಿಂದೆ ಲೋಕಸಭೆಯಲ್ಲಿ ತ್ರಿವಳಿ ತಲಾಕ್ ತಿದ್ದುಪಡಿ ಮಸೂದೆಗೆ ಅನುಮೋದನೆ ದೊರೆತಿತ್ತು, ಆದರೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿರಲಿಲ್ಲ. ಇದೀಗ ರಾಜ್ಯಸಭೆಯಲ್ಲಿ 99-84 ಮತಗಳ ಅಂತರದಿಂದ ಅಂಗೀಕಾರಗೊಂಡಿದ್ದು, ಇನ್ನು ಮುಂದೆ ತ್ರಿವಳಿ ತಲಾಕ್ ಶಿಕ್ಷಾರ್ಹ ಅಪರಾಧವಾಗಲಿದೆ.
ಪ್ರಸ್ತುತ ತಿದ್ದು ಪಡಿಯ ಪ್ರಕಾರ ತ್ರಿವಳಿ ತಲಾಕ್ ಜಾಮೀನು ರಹಿತ ಅಪರಾಧವಾಗಿಯೇ ಮುಂದುವರಿಯಲಿದೆ. ಆದರೆ, ಪತ್ನಿಯ ಅಭಿಪ್ರಾಯ ಪಡೆದು ನ್ಯಾಯಾಧೀಶರು ಜಾಮೀನು ನೀಡಬಹುದು. ಮಕ್ಕಳನ್ನು ತನ್ನ ವಶಕ್ಕೆ ನೀಡುವಂತೆ ತಾಯಿ ಅರ್ಜಿ ಹಾಕಬಹುದಾಗಿದೆ.
Comments are closed.