ರಾಷ್ಟ್ರೀಯ

370 ನೇ ವಿಧಿ ರದ್ದಿನಿಂದಾಗಿ ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭ: ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Pinterest LinkedIn Tumblr

ನವ ದೆಹಲಿ: ಜಮ್ಮು-ಕಾಶ್ಮೀರ ನಮ್ಮ ದೇಶದ ಮುಕುಟು ಇಂತಹ ರಾಜ್ಯದಲ್ಲಿ ಉಗ್ರವಾದ ಹಾಗೂ ಭಯೋತ್ಪಾದನೆ ತಲೆ ಎತ್ತಲು, ರಾಜ್ಯ ಅಭಿವೃದ್ಧಿಯಿಂದ ವಂಚಿತವಾಗಲು ಕಲಂ 370 ಮತ್ತು 35ಎ ಕಾರಣವಾಗಿತ್ತು. ಹೀಗಾಗಿ ಕಣಿವೆ ರಾಜ್ಯದ ಅಭಿವೃದ್ಧಿಗಾಗಿ ಈ ವಿಧಿಗಳನ್ನು ರದ್ದು ಮಾಡಿ ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಲಂ 370 ರದ್ದು ಮಾಡಿರುವ ತಮ್ಮ ಸರ್ಕಾರದ ನಿರ್ಣಯವನ್ನು ಸಮರ್ಥಿಸಿಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಈ ವಿಚಾರ ರಾಷ್ಟ್ರಾದಾದ್ಯಂತ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿತ್ತು. ಆದರೆ, ಈ ಕುರಿತು ಕಳೆದ ಮೂರು ದಿನಗಳಿಂದ ಮೌನ ವಹಿಸಿದ್ದ ಪ್ರಧಾನಿ ಮೋದಿ ಕೊನೆಗೂ ಇಂದು ತಮ್ಮ ಮೌನ ಮುರಿದಿದ್ದಾರೆ. ಕಲಂ 370 ರದ್ದು ಮಾಡಲು ಕಾರಣ ಏನು? ಹಾಗೂ ಇದರಿಂದ ಕಣಿವೆ ರಾಜ್ಯಕ್ಕೆ ಆಗುವ ಲಾಭವೇನು? ಎಂಬ ಕುರಿತು ಸವಿಸ್ತಾರವಾಗಿ ತಮ್ಮ ಮನದಾಳದ ಮಾತನ್ನು ದೇಶದ ಜನರ ಜೊತೆಗೆ ಹಂಚಿಕೊಂಡಿದ್ದಾರೆ.

“ನಾನು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಇಡೀ ರಾಷ್ಟ್ರದ ಜನರನ್ನು ಅಭಿನಂದಿಸುತ್ತೇನೆ. ಕೆಲವು ವಿಷಯಗಳು ಜೀವಂತವಿರುವವರೆಗೂ ಅವು ಎಂದಿಗೂ ಬದಲಾಗುವುದಿಲ್ಲ ಅಥವಾ ದೂರ ಹೋಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. 370 ನೇ ವಿಧಿ ಇದೇ ರೀತಿಯದಾಗಿತ್ತು.” ಎಂದು ಪ್ರಧಾನಿ ಹೇಳಿದರು.

“ಸರ್ದಾರ್ ಪಟೇಲ್, ಬಾಬಾ ಸಾಹೇಬ್ ಅಂಬೇಡ್ಕರ್, ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ, ಅಟಲ್ ಜೀ ಮತ್ತು ಕೋಟ್ಯಂತರ ದೇಶಭಕ್ತರ ಕನಸು ಈಡೇರಿದೆ.

“ನಾವು ಒಂದು ರಾಷ್ಟ್ರವಾಗಿ, ಒಂದು ಕುಟುಂಬವಾಗಿ, ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಸಹೋದರರು ಮತ್ತು ಸಹೋದರಿಯರು ಅನೇಕ ಹಕ್ಕುಗಳಿಂದ ವಂಚಿತರಾಗಿದ್ದಾರೆ ಮತ್ತು ಅವರ ಅಭಿವೃದ್ಧಿಗೆ ಇದು ಒಂದು ದೊಡ್ಡ ಅಡಚಣೆ ಇದ್ದಿತ್ತು, ಇದೀಗ ವಿಶೇಷ ಸ್ಥಾನಮಾನ ರದ್ದು ಆಗಿರುವುದರಿಂದ ಅವರೂ ದೇಶದ ಉಳಿದ ರಾಜ್ಯಗಳ ನಾಗರಿಕರಂತೆ ಅಭಿವೃದ್ದಿಯ ಹಾದಿಯಲ್ಲಿ ಮುಂದುವರಿಯಬಹುದು.” “ಮೋದಿ ಹೇಳಿದರು.

“ವಿಶೇಷ ಸ್ಥಾನಮಾನದ ಕಾರಣ, ಜಮ್ಮು ಮತ್ತು ಕಾಶ್ಮೀರಕ್ಕೆ ನಿಜವಾಗಿ ಸಿಗಬೇಕಿದ್ದ ಅಭಿವೃದ್ಧಿ ಅವಕಾಶವನ್ನು ಪಡೆಯಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

“ಈಗ, ಜಮ್ಮು ಮತ್ತು ಕಾಶ್ಮೀರಕ್ಕೂ ಭಾರತದ ಉಳಿದ ಭಾಗಗಳಂತೆ ಅಭಿವೃದ್ಧಿಯ ಫಲ ಸಿಗಲಿದೆ” ಎಂದು ಪ್ರಧಾನಿ ಹೇಳಿದರು.

ಜಮ್ಮು ಕಾಶ್ಮೀರ ಜನರು ಇತರ ರಾಜ್ಯಗಳಿಗೆ ಅನ್ವಯಿಸುವ ಕಾನೂನುಗಳು ಮತ್ತು ಯೋಜನೆಗಳ ಪ್ರಯೋಜನಗಳಿಂದ ವಂಚಿತರಾಗಿದ್ದರು. ಈಗ ಅವರು ಇತರ ರಾಜ್ಯಗಳ ಜನರಂತೆ ಆರೋಗ್ಯ ಮತ್ತು ಶಿಕ್ಷಣದ ಪ್ರಯೋಜನಗಳನ್ನು ಸಹ ಪಡೆಯುತ್ತಾರೆ” ಎಂದು ಪ್ರಧಾನಿ ಹೇಳಿದರು.

“ಜಮ್ಮು ಮತ್ತು ಕಾಶ್ಮೀರವನ್ನು ನೇರವಾಗಿ ಕೇಂದ್ರ ಆಡಳಿತದಲ್ಲಿ ತರುವ ಬಗೆಗೆ ಚೆನ್ನಾಗಿ ಯೋಚಿಸಲಾಗಿದೆ. ಮತ್ತು ಇದು ಸ್ವಲ್ಪ ಸಮಯದವರೆಗೆ ಮುಂದುವರಿಯಲಿದೆ.

“ರಾಜ್ಯಪಾಲರ ಆಡಳಿತವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಗೆ ತಂದಾಗಿನಿಂದ, ರಾಜ್ಯದ ಆಡಳಿತ ನಿರ್ವಾಹಕರು ಕೇಂದ್ರದೊಡನೆ ನೇರ ಸಂಪರ್ಕದಲ್ಲಿದ್ದಾರೆ., ಇದರಿಂದಾಗಿ ಉತ್ತಮ ಆಡಳಿತದ ಪರಿಣಾಮಗಳನ್ನು ನಾವಿಂದು ಕಾಣುತ್ತಿದ್ದೇವೆ.

“370 ನೇ ವಿಧಿ ಜಮ್ಮು, ಕಾಶ್ಮೀರ ಮತ್ತು ಲಡಾಖ್ ಜನರ ಮೇಲೆ ಹೇಗೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬುದರ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಮತ್ತು ಆಶ್ಚರ್ಯಕರ ಸಂಗತಿಯೆಂದರೆ, ಈ ವಿಧಿಯು ಜನರಿಗೆ ಹೇಗೆ ಪ್ರಯೋಜನವನ್ನು ನೀಡಿತು ಎಂಬುದನ್ನು ಯಾರೂ ನಿಜವಾಗಿಯೂ ಹೇಳಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಜನರಿಗೆ ತಮ್ಮ ಸ್ಥಳೀಯ ಪ್ರತಿನಿಧಿಗಳನ್ನು ಮೊದಲಿನಂತೆಯೇ ಆಯ್ಕೆ ಮಾಡುವುದಕ್ಕೆ ಅವಕಾಶವಿರಲಿದೆ ಎಂದು ಮೋದಿ ಹೇಳಿದ್ದಾರೆ.

“ಅವರು ಮುಕ್ತ ಮತ್ತು ನ್ಯಾಯಯುತವಾದ ಪಂಚಾಯತ್ ಚುನಾವಣೆಗಳನ್ನುಕಾಣಲಿದ್ದಾರೆ. ಅದೇ ರೀತಿ ವಿಧಾನಸಭಾ ಚುನಾವಣೆಗಳು ಸಹ ನಡೆಯಲಿವೆ. ಎರಡು-ಮೂರು ದಶಕಗಳಿಂದ ಬಾಕಿ ಇರುವ ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ ಅನ್ನು ನೇಮಕ ಮಾಡುವಂತೆ ನಾನು ರಾಜ್ಯಪಾಲರನ್ನು ಒತ್ತಾಯಿಸುತ್ತೇನೆ” ಎಂದು ಪ್ರಧಾನಿ ಹೇಳಿದರು.

“ಜಮ್ಮು ಮತ್ತು ಕಾಶ್ಮೀರದ ಜನರಿಗೆ ಶೀಘ್ರದಲ್ಲೇ ಮುಕ್ತ ಮತ್ತು ನ್ಯಾಯಯುತ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಅವಕಾಶ ದೊರಕಲಿದೆ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಅವರು ಹೇಳಿದರು.

Comments are closed.