ರಾಷ್ಟ್ರೀಯ

ಮೋದಿ, ಅಮಿತ್ ಶಾ ಹತ್ಯೆಗೆ ಉಗ್ರರರು ಸಂಚು

Pinterest LinkedIn Tumblr


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಹತ್ಯೆಗೆ ಉಗ್ರರು ಯೋಜನೆ ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ದೇಶಾದ್ಯಂತ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವಾಲಯ ಘೋಷಣೆ ಮಾಡಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ವಾಪಸ್‌ ಪಡೆದುದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನ ಉಗ್ರರರು ದಾಳಿ ನಡೆಸಲು ಜೈಷ್‌-ಎ-ಮೊಹಮ್ಮದ್ ಗ್ಯಾಂಗ್​ ಸಂಚು ರೂಪಿಸಿದ್ದಾರೆ.

ದೇಶದ ಪ್ರಮುಖ 30 ನಗರಗಳ ಮೇಲೆ ಮತ್ತು ಪಾಕಿಸ್ತಾನದ ಗಡಿಗೆ ಹತ್ತಿರದಲ್ಲಿರುವ ವಾಯುನೆಲೆಗಳ ಮೇಲೆ ಆತ್ಮಹತ್ಯಾ ದಾಳಿ ನಡೆಸಲು ಉಗ್ರರು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ಎಲ್ಲಾ ವಾಯುನೆಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ’ ಎಂದು ಮಾಧ್ಯಮವೊಂದು ತಿಳಿಸಿದೆ.

ರಕ್ಷಣಾ ಸಚಿವಾಲಯ ಮತ್ತು ಗುಪ್ತಚರ ಸಂಸ್ಥೆಗಳು ಪಡೆದ ಮಾಹಿತಿಯ ಪ್ರಕಾರ, ಪಾಕಿಸ್ತಾನ ಮೂಲದ ಭಯೋತ್ಪಾದಕ ಜೈಶ್-ಎ-ಮೊಹಮ್ಮದ್ ಗುಂಪು ವಾಯುನೆಲೆಗಳ ಮೇಲೆ ಆತ್ಮಹತ್ಯಾ ದಾಳಿಗೆ ಸಂಚು ರೂಪಿಸುತ್ತಿದ್ದಾರೆ ಎಂದು ತಿಳಿಸಿದೆ.

Comments are closed.