ರಾಷ್ಟ್ರೀಯ

ಬಸ್ ಹರಿದು ನಾಲ್ವರು ಮಹಿಳೆಯರು, ಮೂವರು ಮಕ್ಕಳು ಸಾವು

Pinterest LinkedIn Tumblr


ಬುಲಂದ್ ಶಹರ್: ಬಸ್ ಹರಿದು ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

ತೀರ್ಥಯಾತ್ರೆಗೆಂದು ಗಂಗಾಘಾಟ್ ಗೆ ಬಂದಿದ್ದ ಜನರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರು. ಈ ವೇಳೆ ಖಾಸಗಿ ಬಸ್ಸೊಂದು ಅವರ ಮೇಲೆ ಹರಿದು ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಉತ್ತರಪ್ರದೇಶದ ಹತ್ರಾಸ್ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ನಂತರ ಬಸ್ ಚಾಲಕ ಪರಾರಿಯಾಗಿದ್ದು ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Comments are closed.