ರಾಷ್ಟ್ರೀಯ

ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದ ಮಹಿಳೆಯನ್ನೇ ವಿವಾಹವಾದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್

Pinterest LinkedIn Tumblr


ಉತ್ತರ ಪ್ರದೇಶ: ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಮಹಿಳೆಯನ್ನೇ ವಿವಾಹವಾದ ಪ್ರಸಂಗ ಕುಶಿನಗರದಲ್ಲಿ ನಡೆದಿದೆ.

ಹಾಪುರ್ ಉಪವಿಭಾಗಿಯ ಮ್ಯಾಜಿಸ್ಟ್ರೇಟ್ ಆಗಿ ಕೆಲಸ ಮಾಡುತ್ತಿದ್ದ ದಿನೇಶ್ ಕುಮಾರ್ ಎಂಬಾತನ ಮೇಲೆ ಮಹಿಳೆಯೋರ್ವರು ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಿದ್ದರು. 4 ವರ್ಷಗಳಿಂದ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅನಂತರ ಕ್ಷುಲ್ಲಕ ಕಾರಣಕ್ಕೆ ಜಗಳವಾದ ಕಾರಣ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದರು.

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಮದುವೆಯಾಗುವಂತೆ ನಿರಂತರವಾಗಿ ಒತ್ತಾಯಿಸುತ್ತಿದ್ದರಿಂದ ಕೊನೆಗೂ ದಿನೆಶ್ ಕುಮಾರ್ ಮದುವೆಯಾಗಲು ಒಪ್ಪಿಗೆ ಸೂಚಿಸಿ ಕುಶಿನಗರ ಜಿಲ್ಲಾ ಮಾಜಿಸ್ಟ್ರೇಟ್ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

Comments are closed.