ನವದೆಹಲಿ : ಕಳೆದ ಹಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ಕುರಿತಂತೆ ದೆಹಲಿ ಹೈಕೋರ್ಟ್ ನಲ್ಲಿ ಕೈಗೆತ್ತಿಕೊಂಡಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ಡಿಕೆಶಿ ಪರ ವಕೀಲರಾದ ಮನು ಸಿಂಘ್ವಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ, ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
ಮುಕುಲ್ ರೋಹಟಗಿ, ಅಭಿಷೇಕ್ ಮನು ಸಿಂಘ್ವಿ, ದಯಾಳ್ ಅವರಿಂದ ಡಿಕೆ ಶಿವಕುಮಾರ್ ಪರ ಜಾಮೀನು ಅರ್ಜಿಯ ಕುರಿತಂತೆ ನ್ಯಾಯಮೂರ್ತಿಗಳ ಮುಂದೆ ವಾದ ಮಂಡನೆ ಮಾಡಬೇಕಿತ್ತು. ಆದ್ರೇ, ಡಿಕೆ ಶಿವಕುಮಾರ್ ಪರ ಹೀರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಇಂದಿನ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಕೋರ್ಟ್ ಮುಂದೂಡಿದೆ.
Comments are closed.