ರಾಷ್ಟ್ರೀಯ

ಹಬ್ಬದ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ಭೀತಿ – ರಾಜಧಾನಿಯಲ್ಲಿ ಭಾರಿ ಕಟ್ಟೆಚ್ಚರ

Pinterest LinkedIn Tumblr

ನವದೆಹಲಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಪಾಕಿಸ್ತಾನ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಯೋಜನೆ ರೂಪಿಸಿದೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ಜನ ಸೇರುವ ಜಾಗಗಳಲ್ಲಿ ಬಿಗು ಬಂದೋಬಸ್ತು ಮಾಡಲಾಗಿದೆ.

ಮಾಲ್ ಗಳು, ರೈಲ್ವೇ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಂಬೈ, ಬೆಂಗಳೂರು, ಅಹಮದಾಬಾದ್ ನಗರಗಳಲ್ಲಿ ಕೂಡಾ ಕಟ್ಟೆಚ್ಚರ ವಹಿಸಲಾಗಿದೆ.

Comments are closed.