ರಾಷ್ಟ್ರೀಯ

ಸತತ 2ನೇ ಬಾರಿಗೆ ಹರ್ಯಾಣ ಮುಖ್ಯಮಂತ್ರಿಯಾಗಿ ಗದ್ದುಗೆಗೇರಿದ ಬಿಜೆಪಿಯ ಮನೋಹರ ಲಾಲ್ ಖಟ್ಟರ್

Pinterest LinkedIn Tumblr


ಚಂಡೀಗಢ್: ಹರ್ಯಾಣದ ಬಿಜೆಪಿ ಧುರೀಣ ಮನೋಹರ್ ಲಾಲ್ ಖಟ್ಟರ್ ರವಿವಾರ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇಲ್ಲಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜೆಜೆಪಿ ಪಕ್ಷದ ನಾಯಕ ದುಷ್ಯಂತ ಚೌಟಾಲ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ ನಡ್ಡಾ, ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಶಿರೋಮಣಿ ಅಕಾಲಿ ದಳ ನಾಯಕ ಸುಖಬೀರ್ ಸಿಂಗ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಜನನಾಯಕ್ ಜನತಾ ಪಕ್ಷ ಮತ್ತು ಇತತರೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹರ್ಯಾಣದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿದಿದೆ.

Comments are closed.