ರಾಷ್ಟ್ರೀಯ

ಕೊಳವೆ ಬಾವಿಯಲ್ಲಿ ಬಿದ್ದಿದ್ದ ಬಾಲಕನ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸುತ್ತಿದ್ದ ದಂಪತಿ- ಟಬ್‍ನಲ್ಲಿ ಬಿದ್ದು ಪುತ್ರಿ ಸಾವು

Pinterest LinkedIn Tumblr


ತಿರುವನಂತಪುರಂ: ಕೊಳವೆ ಬಾವಿಯಲ್ಲಿ ಬಿದ್ದಿದ್ದ ಬಾಲಕ ಸುಜೀತ್ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸುತ್ತಿದ್ದ ದಂಪತಿಯ ಪುತ್ರಿ ಮನೆಯ ಟಬ್‍ನಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಎರಡು ವರ್ಷದ ಬಾಲಕಿ ರೇವತಿ ಸಂಜನಾ ಮೃತ ದುರ್ದೈವಿ. ತೂತ್ತುಕುಡಿ ಸಮೀಪದ ಥ್ರೇಸ್‍ಪುರಂ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ರೇವತಿ ಪೋಷಕರು ಸುಜೀತ್ ರಕ್ಷಣಾ ಕಾರ್ಯಾಚರಣೆಯನ್ನು ಟಿವಿಯಲ್ಲಿ ನೋಡುತ್ತಿದ್ದರು. ಈ ವೇಳೆ ರೇವತಿ ಆಟವಾಡುತ್ತಾ ಟಬ್‍ನಲ್ಲಿ ಬಿದ್ದಿದ್ದಾಳೆ. ಮಗಳು ಕಾಣಿಸದೆ ಇರುವುದರಿಂದ ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದಿದ್ದಾಗ ಟಬ್‍ನಲ್ಲಿ ನೋಡಿದ್ದು, ಬಾಲಕಿ ಪತ್ತೆಯಾಗಿದ್ದಾಳೆ. ತಕ್ಷಣವೇ ರೇವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತಪಾಸಣೆ ಮಾಡಿದ ವೈದ್ಯರು, ಬಾಲಕಿ ಮೃತಪಟ್ಟಿದ್ದಾಳೆ ಎಂದು ಖಚಿತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನ ತಿರುಚ್ಚಿ ನಡಕಟ್ಟುಪಟ್ಟಿ ಸಮೀಪ ಬೋರ್‍ವೆಲ್‍ಗೆ ಶುಕ್ರವಾರ ಸಂಜೆ ಸುಜಿತ್(2) ಆಯಾತಪ್ಪಿ ಬಿದ್ದಿದ್ದನು. ಸುಮಾರು 600 ಅಡಿ ಆಳದ ಬೋರ್‍ವೆಲ್‍ನಲ್ಲಿ ಬಿದ್ದ ಸುಜಿತ್ 100 ಅಡಿ ಆಳದಲ್ಲಿ ಸಿಲುಕಿದ್ದನು. ಕಳೆದ ನಾಲ್ಕು ದಿನಗಳಿಂದ ಸುಜಿತ್ ನನ್ನು ರಕ್ಷಿಸಲು ಅಲ್ಲಿನ ಜಿಲ್ಲಾಡಳಿತ ಹರಸಾಹಸ ಪಟ್ಟರೂ ಬಾಲಕನ ಜೀವ ಉಳಿಸಲು ಆಗಲಿಲ್ಲ. ಜಿಲ್ಲಾಡಳಿತ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ.

ವಿಪರೀತ ದುರ್ವಾಸನೆ ಬರುತ್ತಿರುವ ಕಾರಣ ಅಧಿಕಾರಿಗಳು ಕಾರ್ಯಾಚರಣೆಯನ್ನು ನಿಲ್ಲಿಸಿದ್ದಾರೆ. ಈ ಬಗ್ಗೆ ಅಧಿಕಾರಿಯೊಬ್ಬರು ಮಾತನಾಡಿ, ನಾವು ಬಾಲಕನನ್ನು ರಕ್ಷಣೆ ಮಾಡಲು ಸಾಕಷ್ಟು ಕಷ್ಟಪಟ್ಟೆವು ಆದರೆ ನಮ್ಮಿಂದ ಆತನನ್ನು ಜೀವಂತವಾಗಿ ಕೊಳವೆಬಾವಿಯಿಂದ ಹೊರತೆಗೆಯಲು ಸಾಧ್ಯವಾಗಲಿಲ್ಲ. ಕೊಳವೆಬಾವಿಯಿಂದ ಮೃತದೇಹದ ಕೊಳೆತ ದುರ್ವಾಸನೆ ಬರುತ್ತಿದ್ದ ಕಾರಣ ಆತ ಮೃತಪಟ್ಟಿರುವುದು ಖಚಿತವಾಗಿದೆ. ಬಾಲಕನ ಮೃತದೇಹ ಹೆರತೆಗೆಯಲಾಗಿದ್ದು, ಅದನ್ನು ಮರಣೋತ್ತರ ಪರೀಕ್ಷೆಗೆಂದು ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.

Comments are closed.