ದೆಹಲಿ: ಪೊಲೀಸರು ಹಾಗೂ ವಕೀಲರ ನಡುವೆ ನಡೆದ ಘರ್ಷಣೆಯಲ್ಲಿ ವಕೀಲರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ತೀಸ್ ಹಾಜರಿ ಕೋರ್ಟ್ ಬಳಿ ನಡೆದಿದೆ.
ಘರ್ಷಣೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು ಪೊಲೀಸರು ಗುಂಡು ಹಾರಿಸಿ ಓರ್ವ ವಕೀಲ ಗಂಭೀರ ಗಾಯಗೊಂಡಿದ್ದು ಅವರನ್ನು ಸೇಂಟ್ ಸ್ಟೀಫನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘರ್ಷಣೆಯಲ್ಲಿ ಹಲವು ಪೊಲೀಸ್ ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ. ನ್ಯಾಯಾಲಯದ ಸಂಕೀರ್ಣದಲ್ಲಿನ ವಾಹನ ಪಾರ್ಕಿಂಗ್ ವಿಷಯದಲ್ಲಿ ಘರ್ಷಣೆ ನಡೆದಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
Comments are closed.