ರಾಷ್ಟ್ರೀಯ

ಮನೆಯೊಂದಕ್ಕೆ ಬೆಂಕಿ ತಗುಲಿ ಮೂವರು ಮಹಿಳೆಯರು ಸಜೀವ ದಹನ

Pinterest LinkedIn Tumblr


ನವದೆಹಲಿ: ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮೂವರು ಮಹಿಳೆಯರು ಸಜೀವ ದಹನವಾಗಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶಾಲಿಮಾರ್ ಭಾಗ್ ಪ್ರದೇಶದಲ್ಲಿ ಶನಿವಾರ ನಡೆದಿದೆ.

ಮೃತಪಟ್ಟವರನ್ನು ಕಾಂತ (75), ಕಿರಣ್ ಶರ್ಮಾ (65) ಸೋಮ್ ವತಿ(42) ಎಂದು ಹೇಳಲಾಗಿದೆ.

ಶನಿವಾರ ಸಂಜೆ 6 ಗಂಟೆ ವೇಳೆಗೆ ಬೆಂಕಿ ಅವಘಡವಾಗಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮನೆಯಲ್ಲಿದ್ದ 7 ಮಂದಿಯನ್ನು ರಕ್ಷಿಸಿದ್ದಾರೆ. ಆದರೇ ಅದರಲ್ಲಿ ಮೂವರು ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಗಾಯಗೊಂಡವರನ್ನು ಲಜ್ ವಂತಿ, ಈನಾ, ಅಕ್ಷಿತ್ ಮತ್ತು ವನ್ಸಿಕಾ ಎಂದು ಗುರುತಿಸಲಾಗಿದೆ.

ವಾರದ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿನ ಝಾನ್ಸಿರಾಣಿ ರಸ್ತೆಯಲ್ಲಿರುವ ಕೃಷಿ ಮಾರುಕಟ್ಟೆ ಗೋದಾಮಿನ ಬಹುಮಹಡಿ ಕಟ್ಟಡದಲ್ಲಿ, ದಿಢೀರ್ ಅಗ್ನಿ ಅವಘಡ ಸಂಭವಿಸಿ, ಬೆಂಕಿಯ ಕೆನ್ನಾಲಗೆಗೆ ಸಿಲುಕಿ 43 ಜನ ಸಾವನ್ನಪ್ಪಿ, ಹಲವರು ಗಂಭೀರ ಗಾಯಗೊಂಡಿದ್ದರು.

Comments are closed.