ರಾಷ್ಟ್ರೀಯ

ಪ್ರವಾಹ: ಕೇಂದ್ರದಿಂದ ರಾಜ್ಯಕ್ಕೆ 1869 ಕೋಟಿ ರೂ. ಪರಿಹಾರ

Pinterest LinkedIn Tumblr


ಹೊಸದಿಲ್ಲಿ: ಇತ್ತೀಚೆಗೆ ತುಮಕೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮಾಡಿದ ಮನವಿಗೆ ಸ್ಪಂದನೆ ಸಿಕ್ಕಿದೆ.

ರಾಜ್ಯದಲ್ಲಿ ಪ್ರವಾಹ ಪರಿಹಾರಕ್ಕಾಗಿ ಕೇಂದ್ರ ಸರಕಾರ ಅನುದಾನ ಘೋಷಣೆ ಮಾಡಿದೆ.

ಕಳೆದ ವರ್ಷ ಅತಿವೃಷ್ಟಿಯಿಂದ ತತ್ತರಿಸಿದ್ದ ಕರ್ನಾಟಕಕ್ಕೆ ಕೇಂದ್ರ ಸರಕಾರ ಸೋಮವಾರ 1869 ಕೋಟಿ ರೂ. ಪರಿಹಾರ ಘೋಷಣೆ ಮಾಡಿದೆ.

ಮೊದಲ ಹಂತದಲ್ಲಿ ಕರ್ನಾಟಕಕ್ಕೆ 1200 ಕೋಟಿ ರೂ. ಪರಿಹಾರ ಘೋಷಿಸಲಾಗಿತ್ತು.

ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅನುದಾನ ಬಿಡುಗಡೆ ಮಾಡುವ ಕುರಿತು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಪರಿಹಾರ ನಿಧಿ (ಎನ್‌ಡಿಆರ್‌ಎಫ್‌) ಮೂಲಕ ಈ ಹಣ ಬಿಡುಗಡೆಯಾಗಲಿದೆ.

ಆಗಸ್ವ್‌ ಮೊದಲ ವಾರದಲ್ಲಿ ಸುರಿದ ಭಾರಿ ಮಳೆಗೆ ದಕ್ಷಿಣ ಕನ್ನಡ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದವು. ಕೇಂದ್ರದಿಂದ ಅಗತ್ಯ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರಿಗೆ ಮನವಿ ಮಾಡಿದ್ದರು.

Comments are closed.