ಲಕ್ನೋ: ಮುಂಜಾನೆ ವಾಕಿಂಗ್ ಹೋಗಿದ್ದ ಸಮಯದಲ್ಲಿ ವಿಶ್ವ ಹಿಂದೂ ಮಹಾಸಭಾ ಉತ್ತರ ಪ್ರದೇಶದ ಅಧ್ಯಕ್ಷನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಲಕ್ನೋದ ಹಜರತ್ ಗಂಜ್ ನಲ್ಲಿ ರವಿವಾರ ಮುಂಜಾನೆ ಈ ಘಟನೆ ನಡೆದಿದ್ದು, ವಿಶ್ವ ಹಿಂದೂ ಮಹಾಸಭಾ ಅಧ್ಯಕ್ಷ ರಂಜಿತ್ ಬಚ್ಚನ್ ಹತ್ಯೆಯಾದವರು.
ರಂಜಿತ್ ಬಚ್ಚನ್ ಅವರು ರವಿವಾರ ಮುಂಜಾನೆ ವಾಕಿಂಗ್ ಗೆ ಹೋಗಿದ್ದಾಗ ಅಪರಿಚಿತರು ಬೈಕ್ ನಲ್ಲಿ ಬಂದು ಗುಂಡು ಹಾರಿಸಿದ್ದಾರೆ. ರಂಜಿತ್ ಬಚ್ಚನ್ ತಲೆಗೆ ಎರಡು ಬಾರಿ ಗುಂಡು ಹಾರಿಸಲಾಗಿದ್ದು ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಗುಂಡಿನ ದಾಳಿಯಲ್ಲಿ ರಂಜಿತ್ ಬಚ್ಚನ್ ಸಹೋದರ ಕೂಡಾ ಗಾಯಗೊಂಡಿದ್ದಾರೆ. ಅವರಿಗೂ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳದಲ್ಲಿ ಬಿಗುವಿನ ವಾತವರಣವಿದ್ದು, ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ.
Comments are closed.