ರಾಷ್ಟ್ರೀಯ

ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಎಂದು ಟೆಕ್ಕಿ ಸೂಸೈಡ್

Pinterest LinkedIn Tumblr


ಹೈದರಾಬಾದ್: ಮದುವೆ ಆಗುತ್ತಿಲ್ಲ ಎಂದು ಮನನೊಂದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರ ಪ್ರದೇಶದ ರಾಮಂತಪುರದಲ್ಲಿ ನಡೆದಿದೆ.

ಪಿ. ನಿಖಿಲ್ ಗೌಡ್(24) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ರಾಮಂತಪುರದ ಶಾರದಾನಗರದ ನಿವಾಸಿಯಾಗಿರುವ ನಿಖಿಲ್ ಏರೆನಾ ಟವರ್ಸ್‍ನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದನು. ಕೆಲವು ದಿನಗಳಿಂದ ನಿಖಿಲ್ ಕುಟುಂಬಸ್ಥರು ಆತನಿಗಾಗಿ ಹುಡುಗಿಯನ್ನು ಹುಡುಕುತ್ತಿದ್ದರು.

ಕುಟುಂಬಸ್ಥರು ನಿಖಿಲ್‍ಗಾಗಿ ಹುಡುಗಿ ಹುಡುಕುತ್ತಿದ್ದರೂ ಕಾರಣಾಂತರಗಳಿಂದ ಹುಡುಗಿ ಸಿಗುತ್ತಿರಲಿಲ್ಲ. ಇದರಿಂದ ನಿಖಿಲ್ ಖಿನ್ನತೆಗೆ ಒಳಗಾಗಿ ಸೋಮವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮನೆಯವರು ಮನೆಗೆ ಹಿಂತಿರುಗಿದಾಗ ಡೋರ್ ಲಾಕ್ ಆಗಿರುವುದು ಕಂಡು ಬಂತು. ಎಷ್ಟೇ ಬಾಗಿಲು ತಟ್ಟಿದ್ದರು ನಿಖಿಲ್ ಯಾವುದೇ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಬಾಗಿಲು ಒಡದು ಮನೆಯೊಳಗೆ ಹೋಗಿದ್ದಾರೆ. ಈ ವೇಳೆ ನಿಖಿಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಕುಟುಂಬಸ್ಥರು ನಿಖಿಲ್‍ನನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ವೈದ್ಯರು ಆತ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದರು. ಸದ್ಯ ಈ ಬಗ್ಗೆ ಉಪ್ಪಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.