ದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಪವನ್ ಗುಪ್ತಾ ಕ್ಷಮದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಬುಧವಾರ ತಿರಸ್ಕರಿಸಿದ್ದಾರೆ. ಈ ಮೂಲಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ.
ದೇಶವನ್ನೇ ಬಿಚ್ಚಿ ಬೀಳಿಸಿದ ನಿರ್ಭಯಾ ಸಾಮೂಹಿಕ ಅತ್ಯಾಚಾರದಲ್ಲಿ ನಾಲ್ವರು ಅಪರಾಧಿಗಳಲ್ಲಿ ಓರ್ವನಾಗಿರುವ ಪವನ್ ಗುಪ್ತಾ , ಸೋಮವಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ್ದ ಬಳಿಕ, ಕ್ಷಮದಾನವನ್ನು ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದ. ಇಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮದಾನ ಅರ್ಜಿಯನ್ನು ತಿರಸ್ಕರಿದ್ದಾರೆ. ಈ ಮೂಲಕ ಅಪರಾಧಿಗಳಿಗಿದ್ದ ಎಲ್ಲಾ ಕಾನೂನಿನ ಬಾಗಿಲು ಮುಚ್ಚಿದಂತಾಗಿದೆ. ಇನ್ನಷ್ಟೇ ಹೊಸ ಡೆತ್ ವಾರೆಂಟ್ ಜಾರಿಯಾಗಬೇಕಿದೆ.
Comments are closed.