ರಾಷ್ಟ್ರೀಯ

ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣ:14 ಮಂದಿ ವಲಸೆ ಕಾರ್ಮಿಕರ ಬಲಿ

Pinterest LinkedIn Tumblr

ಮುಜಾಫರ್ ನಗರ(ಉತ್ತರ ಪ್ರದೇಶ): ವಲಸೆ ಕಾರ್ಮಿಕರು ಮಾರ್ಗ ಮಧ್ಯೆ ತಮ್ಮೂರಿಗೆ ಹೋಗುತ್ತಿರುವಾಗ ಸಾಯುವ ಪ್ರಕರಣ ಮುಂದುವರಿದಿದೆ. ಕಳೆದ ತಡರಾತ್ರಿ ಮುಜಾಫರ್ ನಗರ-ಶಹರಾನ್ ಪುರ ಹೆದ್ದಾರಿಯಲ್ಲಿ 6 ಮಂದಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಬಸ್ ಹರಿದು ಮೃತಪಟ್ಟಿದ್ದಾರೆ.

ಅನಾಮಧೇಯ ಬಸ್ ಚಾಲಕನ ವಿರುದ್ಧ ಕೇಸು ದಾಖಲಾಗಿದೆ. ಘಲೌಲಿ ಚೆಕ್ ಪೋಸ್ಟ್ ಹತ್ತಿರ ಈ ಘಟನೆ ನಡೆದಿದೆ.

ಮತ್ತೊಂದು ಘಟನೆಯಲ್ಲಿ ಮಧ್ಯ ಪ್ರದೇಶದ ಕ್ಯಾಂಟ್ ಪಿ ಎಸ್ ಗುನಾ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಸಂಚರಿಸುತ್ತಿದ್ದ ಟ್ರಕ್ ಬಸ್ ಗೆ ಡಿಕ್ಕಿ ಹೊಡೆದು 8 ಮಂದಿ ಕಾರ್ಮಿಕರು ಮೃತಪಟ್ಟು 50 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಎಲ್ಲಾ 8 ಮಂದಿ ಕಾರ್ಮಿಕರು ಮಹಾರಾಷ್ಟ್ರದಿಂದ ಉತ್ತರ ಪ್ರದೇಶದ ತಮ್ಮೂರಿಗೆ ಹೊರಟಿದ್ದರು.

Comments are closed.