ಬಹುಭಾಷಾ ಗಾಯಕ, ಗಾನಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತಷ್ಟು ಚಿಂತಾಜನಕವಾಗಿದೆ.
ಕೊರೋನಾ ಸೋಂಕಿನಿಂದ ಬಳಲುತ್ತಿರುವ ಎಸ್ಪಿಬಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಸ್ಪಿಬಿ ರವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಾರದ ಕಾರಣ. ವೆಂಟಿಲೇಟರ್ ವ್ಯವಸ್ಥೆಯಿಂದ ಅವರು ಹೊರ ಬರ್ತಿಲ್ಲ.
ಚೆನ್ನೈನ ಖಾಸಗಿ ಆಸ್ಪತ್ರೆಯ ತಜ್ಞ ವೈದ್ಯರು ಎಸ್ಪಿಬಿ ಆರೋಗ್ಯದ ಮೇಲೆ ತೀವ್ರ ನಿಗಾ ಇಟ್ಟಿದ್ದು, ವೆಂಟಿಲೇಟರ್ ತೆಗೆಯದೇ ಟ್ರೀಟ್ಮೆಂಟ್ ಮಾಡುತ್ತಿದ್ದಾರೆ.
ಕಳೆದ 13ರಿಂದ ಎಸ್ಪಿಬಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕಳೆದ 7 ದಿನಗಳಿಂದ ಅವರು ಐಸಿಯುನಲ್ಲೇ ಇದ್ದಾರೆ. ಆರೋಗ್ಯದಲ್ಲಿ ಯಾವುದೇ ಗಮನಾರ್ಹ ಚೇತರಿಕೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಎಸ್ಪಿಬಿ ರವರ ಆರೋಗ್ಯದ ಬಗ್ಗೆ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರು ಆಂತಕಕ್ಕೊಳಗಾಗಿದ್ದಾರೆ. ತಂದೆ ಯ ಆರೋಗ್ಯದ ಬಗ್ಗೆ ಎಸ್ ಪಿ ಬಿ ಪುತ್ರ ಎಸ್.ಪಿ ಚರಣ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದರ ಮೂಲಕ ಮಾಹಿತಿ ನೀಡುತ್ತಿದ್ದಾರೆ.
ಈ ಮಧ್ಯೆ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ. ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಹಲವರು ಎಸ್ಪಿಬಿ ಅವ್ರ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
Comments are closed.