ರಾಷ್ಟ್ರೀಯ

ಚಂದ್ರಬಾಬು ನಾಯ್ಡು ಭೀಕರ ರಸ್ತೆ ಅಪಘಾತದಲ್ಲಿ ಸ್ವಲ್ಪದರಲ್ಲೇ ಬಚಾವ್​

Pinterest LinkedIn Tumblr


ವಿಜಯವಾಡ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್​. ಚಂದ್ರಬಾಬು ನಾಯ್ಡು ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ವಲ್ಪದರಲ್ಲೇ ಬಚಾವ್​ ಆಗಿರುವ ಘಟನೆ ಶನಿವಾರ ನಡೆದಿದೆ.

ನಾಯ್ಡು ಅವರು ವಿಜಯವಾಡದಿಂದ ಹೈದರಾಬಾದ್​ಗೆ ತೆರಳುವಾಗ ಘಟನೆ ನಡೆದಿದೆ. ಮಾರ್ಗ ಮಧ್ಯೆ ಬಿಡಾಡಿ ದನವೊಂದು ದಿಢೀರನೆ ರಸ್ತೆಗೆ ಅಡ್ಡಲಾಗಿ ಬಂದಿದ್ದರಿಂದ ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಸ್ಕಾರ್ಟ್​ ವಾಹನದ ಚಾಲಕ ತಕ್ಷಣ ಬ್ರೇಕ್​ ಹಾಕಿದ್ದಾರೆ.

ಈ ವೇಳೆ ಹಿಂಬದಿಯಿದ್ದ ಬೆಂಗಾವಲು ವಾಹನ ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಕಾರಿನ ಬಾನೆಟ್​ ಸಂಪೂರ್ಣ ಜಖಂಗೊಂಡಿರುವುದನ್ನು ಮೇಲಿನ ಚಿತ್ರದಲ್ಲಿ ಕಾಣಬಹುದಾಗಿದೆ.

ಅದೃಷ್ಟವಶಾತ್​ ನಾಯ್ಡು ಅವರು ಯಾವುದೇ ಗಾಯಗಳಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Comments are closed.