ರಾಷ್ಟ್ರೀಯ

ಆರ್ಯ ಸಮಾಜದ ಪಂಡಿತ, ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ನಿಧನ

Pinterest LinkedIn Tumblr

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್(80) ಶುಕ್ರವಾರ ಸಂಜೆ ನಿಧನರಾದರು. ಹಲವಾರು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ಗಂಭೀರವಾಗಿದ್ದು ಮಂಗಳವಾರ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಧಾರ್ಮಿಕ ಮುಖಂಡರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದ ಅಗ್ನಿವೇಶ್ ಅವರು ಸೆಪ್ಟೆಂಬರ್ 21, 1939ರಂದು ಆಂಧ್ರ ಪ್ರದೇಶದ ಶ್ರೀಕಾಕುಳಂನಲ್ಲಿ ಜನಿಸಿದ್ದರು. ಅವರು ಹರಿಯಾಣದಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಆರ್ಯ ಸಮಾಜದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಸ್ವಾಮಿ ದಯಾನಂದ ಸರಸ್ವತಿ ಸಿದ್ಧಾಂತ ಪಾಲನೆ ಮಾಡಿಕೊಂಡು 1970 ರಲ್ಲಿ ಆರ್ಯ ಸಮಾಜದ ತತ್ವಗಳ ಆಧಾರದ ಮೇಲೆ ‘ಆರ್ಯ ಸಭಾ’ ಎಂಬ ರಾಜಕೀಯ ಪಕ್ಷವೊಂದನ್ನು ಕಟ್ಟಿದ್ದರು. 1977 ರಲ್ಲಿ ಅವರು ಹರ್ಯಾಣ ವಿಧಾನಸಭೆಯ ಸದ್ಯರಾಗಿ, ಶಿಕ್ಷಣ ಸಚಿವ(1979)ರಾಗಿಯೂ ಸೇವೆ ಸಲ್ಲಿಸಿದ್ದರು. ಸಚಿವರಾಗಿರುವಾಗಲೇ ಬಾಂಡೆಡ್ ಲೇಬರ್ ಲಿಬರೇಶನ್ ಫ್ರಂಟ್ ಸ್ಥಾಪಿಸಿದರು. 2011 ರ ಭ್ರಷ್ಟಾಚಾರ ವಿರೋಧಿ ಚಳವಳಿಯಲ್ಲೂ ಅವರು ಭಾಗವಹಿಸಿದ್ದರು.

 

Comments are closed.