ಶಿಮ್ಲಾ: ನಾಗಾಲ್ಯಾಂಡ್ ರಾಜ್ಯಪಾಲ ಆಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾದ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಇವರು ಸಾವನ್ನಪ್ಪಿದ್ದಾರೆ. ಸಿಬಿಐನ ಮಾಜಿ ನಿರ್ದೇಶಕರು ಆಗಿದ್ದ ಅಧಿಕಾರಿ ಸಾವನ್ನಪ್ಪಿರುವ ಬಗ್ಗೆ ಶಿಮ್ಲಾ ಹೆಚ್ಚುವರಿ ಪೊಲೀಸ್ ಅಧಿಕಾರಿ ಮೋಹಿತ್ ಚಾವ್ಲಾ ಸ್ಪಷ್ಟಪಡಿಸಿದ್ದಾರೆ. ಇದೊಂದು ಆಘಾತಕಾರಿ ಘಟನೆಯಾಗಿದೆ ಎಂದು ಅವರು ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಮೃತಪಟ್ಟ ಅಶ್ವನಿ ಕುಮಾರ್ ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 2006 ರಿಂದ ಜುಲೈ 2008ರವರೆಗೆ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ 2008ರಿಂದ 2010ರವರೆಗೆ ಸಿಬಿಐ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅವರ ಸಾವಿಗೆ ಕಾರಣ ಏನೆಂಬುದು ಇನ್ನು ತಿಳಿದು ಬಂದಿಲ್ಲ.
ಸ್ಥಳದಲ್ಲಿ ಸೂಸೈಡ್ ನೋಟ್ ಸಿಕ್ಕಿದ್ದು, ಇದರಲ್ಲಿ ಈ ಜೀವನ ಮುಗಿದಿದ್ದು, ಹೊಸ ಜೀವನ ಪ್ರಯಾಣಕ್ಕೆ ಹೊರಟ್ಟಿರುವುದಾಗಿ ಬರೆದಿದ್ದಾರೆ. ಇದನ್ನು ಸದ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದೇಶದಲ್ಲಿ ಸಂಚಲನ ಮೂಡಿಸಿದ್ದ ಆರೋಷಿ ತಲ್ವಾರ್ ಹತ್ಯೆ ಪ್ರಕರಣದ ತನಿಖೆಯನ್ನು ಇವರು ನಡೆಸಿದ್ದರು. ಈ ಪ್ರಕರಣ ಸಿಬಿಐಗೆ ಒಪ್ಪಿಸಿದಾಗ ಈ ಸಂಸ್ಥೆ ನಿರ್ದೇಶಕರಾಗಿ ಇವರು ಕಾರ್ಯನಿರ್ವಹಿಸುತ್ತಿದ್ದರು. ತನಿಖೆಗಾಗಿ ಎರಡನೇ ತಂಡವನ್ನು ಅವರು ರಚಿಸಿದ್ದರು.ಈ ತಂಡ ಈ ಪ್ರಕರಣದಲ್ಲಿ ಆರೋಷಿ ಪೋಷಕರೇ ಹತ್ಯೆ ಮಾಡಿದವರು ಎಂದು ವರದಿ ನೀಡಿತು. 2013 ರಿಂದ 2014ರವರೆಗೆ ನಾಗಾಲ್ಯಾಂಡ್ ರಾಜ್ಯಪಾಲರಾಗಿ ಇವರು ಕಾರ್ಯನಿರ್ವಹಿಸಿದ್ದರು.
Comments are closed.