ರಾಷ್ಟ್ರೀಯ

ಉತ್ತರ ಪ್ರದೇಶ: ಬೊಲೆರೋ-ಟ್ರಕ್ ನಡುವೆ ಭೀಕರ ಅಪಘಾತ; ಆರು ಮಕ್ಕಳು ಸೇರಿದಂತೆ 14 ಮಂದಿ ಸಾವು

Pinterest LinkedIn Tumblr

ಪ್ರತಾಪ್ ಗಢ(ಉತ್ತರ ಪ್ರದೇಶ): ಬೊಲೆರೋ ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಆರು ಮಕ್ಕಳು ಸೇರಿದಂತೆ 14 ಮಂದಿ ಮೃತಪಟ್ಟ ಘಟನೆ ಉತ್ತರಪ್ರದೇಶದ ಮಣಿಕ್ ಪುರ ಪೊಲೀಸ್ ಠಾಣಾ ಸರಹದ್ದಿನ ಪ್ರತಾಪ್ ಗರ್ ನಲ್ಲಿ ನಡೆದಿದೆ.

ಎಸ್ ಯುವಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ಕಳೆದ ರಾತ್ರಿ 11.45ರ ಸುಮಾರಿಗೆ ಪ್ರಯಾಗ್ ರಾಜ್-ಲಕ್ನೊ ಹೆದ್ದಾರಿಯ ದೆಶ್ರಾಜ್ ಇನಾರಾ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು ಘಟನೆ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಕಳವಳ ವ್ಯಕ್ತಪಡಿಸಿದ್ದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಾಧ್ಯವಾದ ಎಲ್ಲಾ ನೆರವು ನೀಡುವಂತೆ ಆದೇಶ ನೀಡಿದ್ದಾರೆ.

ಟ್ರಕ್ ನ ಹಿಂಭಾಗದಿಂದ ನಜ್ಜುಗುಜ್ಜಾದ ಕಾರನ್ನು ಬೊಲೆರೊ ಬಳಸಿ ತೆಗೆಯಲಾಗಿದೆ. ಪ್ರತಾಪ್ ಗಢ್ ಎಸ್ಪಿ ಅನುರಾಗ್ ಆರ್ಯ, ಟೈರ್ ಪಂಕ್ಚರ್ ಆಗಿದ್ದರಿಂದ ಹೆದ್ದಾರಿಯ ಪಕ್ಕ ಟ್ರಕ್ ನ್ನು ನಿಲ್ಲಿಸಲಾಗಿತ್ತು. ಆಗ ಹಿಂದಿನಿಂದ ಎಸ್ ಯುವಿ ವೇಗವಾಗಿ ಬಂದು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆಯಿತು. ಗುದ್ದಿದ ರಭಸಕ್ಕೆ ಕಾರಿನ ಮುಂದಿನ ಭಾಗ ಟ್ರಕ್ ನ ಹಿಂಬದಿಗೆ ಸಿಕ್ಕಿಹಾಕಿಕೊಂಡು ಬೊಲೆರೊ ಸಹಾಯದಿಂದ ಹೊರತೆಗೆಯಬೇಕಾಯಿತು ಎಂದಿದ್ದಾರೆ.

ಮೃತಪಟ್ಟವರೆಲ್ಲರೂ ಮದುವೆ ಮುಗಿಸಿ ಜಿಲ್ಲೆಯ ಕುಂದಾದ ತಮ್ಮ ಗ್ರಾಮಕ್ಕೆ ವಾಪಸಾಗುತ್ತಿದ್ದರು.

Comments are closed.